‘ಮಾರ್ಟಿನ್’ ತಂಡದಲ್ಲಿ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

|

Updated on: Jul 26, 2024 | 8:18 PM

ಬಹುನಿರೀಕ್ಷಿತ ‘ಮಾರ್ಟಿನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ನಡುವೆ ಕೆಲವು ಶಾಕಿಂಗ್​ ಸಂಗತಿಗಳ ಬಗ್ಗೆ ಸುದ್ದಿ ಪ್ರಕಟ ಆಗಿವೆ. ಧ್ರುವ ಸರ್ಜಾ ನಟನೆಯ ಈ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್​ ಅವರು ಕಮಿಷನ್​ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಎ.ಪಿ. ಅರ್ಜುನ್​ ತಳ್ಳಿ ಹಾಕಿದ್ದಾರೆ. ತಮ್ಮ ಮೇಲೆ ಬಂದ ಆರೋಪಕ್ಕೆ ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ನಡೆಸಿದ್ದಾರೆ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಚಿತ್ರತಂಡದಲ್ಲಿ ಮನಸ್ತಾಪ ಆಗಿದೆ ಎನ್ನಲಾಗಿದೆ. ನಿರ್ದೇಶಕ ಎ.ಪಿ. ಅರ್ಜುನ್​ ಅವರ ಮೇಲೆ ಕೆಲವು ಆರೋಪಗಳು ಕೇಳಿಬಂದಿವೆ. ನಿರ್ದೇಶಕರಿಂದಲೇ ನಿರ್ಮಾಪಕರಿಗೆ ಮೋಸ ಆಗಿದೆ ಎನ್ನುವ ಸುದ್ದಿಗಳು ಹರಿದಾಡಿವೆ. ಇದಕ್ಕೆ ಸ್ಪಷ್ಟನೆ ನೀಡಲು ಎ.ಪಿ. ಅರ್ಜುನ್​ ಅವರು ಇಂದು (ಜುಲೈ 26) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಸಿನಿಮಾದ ಸಿಜಿ ವರ್ಕ್​ಗಾಗಿ ಕೊಟ್ಟಿದ್ದ ಹಣದಲ್ಲಿ ನಿರ್ದೇಶಕರಿಗೂ ಕಮಿಷನ್ ಹೋಗಿತ್ತಾ ಎಂಬ ಅನುಮಾನ ಇದೆ. ಈ ವಿಚಾರದ ಬಗ್ಗೆ ಎ.ಪಿ. ಅರ್ಜುನ್ ಅವರು ತಮ್ಮ ವಕೀಲರ ಜೊತೆ ಬಂದು ಸುದ್ದಿಗೋಷ್ಠಿಯಲ್ಲಿ ಸಂಪೂರ್ಣ ವಿವರ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on