AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ

ಸುಷ್ಮಾ ಚಕ್ರೆ
|

Updated on: Jun 08, 2026 | 11:02 PM

Share

ಹುತಾತ್ಮ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಅವರ ಅಸಾಧಾರಣ ಶೌರ್ಯ, ಅದಮ್ಯ ಧೈರ್ಯ ಮತ್ತು ರಾಷ್ಟ್ರ ಸೇವೆಯಲ್ಲಿ ಅತ್ಯುನ್ನತ ತ್ಯಾಗಕ್ಕಾಗಿ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ನೀಡಲಾಯಿತು. ಈ ಪ್ರಶಸ್ತಿಯನ್ನು ಸ್ವೀಕರಿಸುವಾಗ ಅವರ ತಾಯಿ ದೂಖ ತಡೆಯಲಾರದೆ ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಮರಣೋತ್ತರ 'ಕೀರ್ತಿ ಚಕ್ರ' ಗೌರವ ನೀಡುವಾಗ ತಾಯಿಯ ಭಾವುಕ ಕ್ಷಣಗಳ ವಿಡಿಯೋ ವೈರಲ್ ಆಗಿದೆ.

ನವದೆಹಲಿ, ಜೂನ್ 8: ಇಂದು ಭಾರತದ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ವೇಳೆ ಮರಣೋತ್ತರ ಪ್ರಶಸ್ತಿಯನ್ನು ಸ್ವೀಕರಿಸುವಾಗ ಆ ಸೈನಿಕರ ಕುಟುಂಬಸ್ಥರು ಕಣ್ಣೀರಿಟ್ಟ ದೃಶ್ಯಗಳು ನೋಡುಗರನ್ನು ಕೂಡ ಭಾವುಕರನ್ನಾಗಿಸಿದವು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರ ತಾಯಿಯು ತಮ್ಮ ಮಗನ ಪರವಾಗಿ ‘ಕೀರ್ತಿ ಚಕ್ರ’ ಪ್ರಶಸ್ತಿಯನ್ನು ಸ್ವೀಕರಿಸಿದ ಕ್ಷಣ ಇಡೀ ದೇಶವನ್ನೇ ಭಾವುಕಗೊಳಿಸಿದೆ.

ಜುಲೈ 6, 2024ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ವೇಳೆ ಅಪ್ರತಿಮ ಧೈರ್ಯ ಮತ್ತು ಶೌರ್ಯವನ್ನು ಪ್ರದರ್ಶಿಸಿದ್ದ ಸಿಪಾಯಿ ಪ್ರವೀಣ್ ಪ್ರಭಾಕರ್, ಇಬ್ಬರು ಉಗ್ರರನ್ನು ಹತ್ಯೆಗೈದು ವೀರಮರಣ ಅಪ್ಪಿದ್ದರು. ಅವರ ಈ ಸಾಹಸ ಮತ್ತು ದೇಶಕ್ಕಾಗಿ ನೀಡಿದ ಬಲಿದಾನವನ್ನು ಭಾರತವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಮರಣೋತ್ತರ ಕೀರ್ತಿ ಚಕ್ರ ಪ್ರಶಸ್ತಿ ನೀಡಲಾಗಿದೆ. ಈ ವೇಳೆ ಅವರ ತಾಯಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಗಲಿಗೊರಗಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅವರನ್ನು ರಾಷ್ಟ್ರಪತಿ ಸಾಂತ್ವನಗೊಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More