Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ದೇಶದ ಬಗ್ಗೆಯೇ ಒಳ್ಳೆಯ ಮಾತುಗಳನ್ನಾಡದವರನ್ನು ಜನ ಒಪ್ಪುವರೇ; ರಾಹುಲ್ ಗಾಂಧಿ ಬಗ್ಗೆ ಗಾಯಕಿ ಮೇರಿ ಮಿಲ್ಬೆನ್ ಪ್ರಶ್ನೆ

‘ದಿ ನ್ಯೂ ಇಂಡಿಯನ್’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರೋಹನ್ ದುವಾ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿದ ಮೇರಿ ಮಿಲ್ಬೆನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ದೇಶದ ಬಗ್ಗೆಯೇ ಒಳ್ಳೆಯ ಮಾತುಗಳನ್ನಾಡದವರನ್ನು ಜನ ಒಪ್ಪುವರೇ; ರಾಹುಲ್ ಗಾಂಧಿ ಬಗ್ಗೆ ಗಾಯಕಿ ಮೇರಿ ಮಿಲ್ಬೆನ್ ಪ್ರಶ್ನೆ
ಮೇರಿ ಮಿಲ್ಬೆನ್ & ರಾಹುಲ್ ಗಾಂಧಿ
Follow us
Ganapathi Sharma
|

Updated on: Jun 30, 2023 | 10:17 PM

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿದೇಶಗಳಿಗೆ ಭೇಟಿ ನೀಡಿದಾಗ ಭಾರತದ ಪ್ರಜಾಪ್ರಭುತ್ವ, ಆಡಳಿತ ಇತ್ಯಾದಿ ವಿಚಾರಗಳ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಾಯಕರು ಅವರನ್ನು ಟೀಕಿಸಿರುವುದು ಹಲವು ಬಾರಿ ನಡೆದಿದೆ. ರಾಹುಲ್ ಗಾಂಧಿ (Rahul Gandhi) ಅವರು ವಿದೇಶಗಳಲ್ಲಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ ಎಂದು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಅಮೆರಿಕದ ಶ್ವೇತಭವನದ ಅಧಿಕೃತ ಗಾಯಕಿ ಮೇರಿ ಮಿಲ್ಬೆನ್ (Mary Milben)  ಕೂಡ ರಾಹುಲ್ ಗಾಂಧಿ ವಿರುದ್ಧ ಅಂಥದ್ದೇ ಮಾತುಗಳನ್ನಾಡಿದ್ದು, ತಮ್ಮದೇ ದೇಶದ ಬಗ್ಗೆ ಒಳ್ಳೆಯ ಮಾತುಗಳನ್ನಾಡದವರನ್ನು ಜನ ಒಪ್ಪುವರೇ ಎಂದು ಪ್ರಶ್ನಿಸಿದ್ದಾರೆ.

‘ದಿ ನ್ಯೂ ಇಂಡಿಯನ್’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರೋಹನ್ ದುವಾ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿದ ಮೇರಿ ಮಿಲ್ಬೆನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಬಗ್ಗೆ ಅವರ ಕೆಲವು ಭಾಷಣಗಳನ್ನು ಕೇಳಿದಾಗ ತಿಳಿಯುತ್ತದೆ. ತಮ್ಮದೇ ದೇಶದ ಬಗ್ಗೆ ಒಳ್ಳೆಯ ಮಾತುಗಳನ್ನಾಡದ ನಾಯಕನನ್ನು ಒಪ್ಪಿಕೊಳ್ಳುವುದು ಅಥವಾ ಅವರ ಪರ ಮತ ಚಲಾಯಿಸುವುದು ಯಾವುದೇ ದೇಶಕ್ಕೆ ಅಥವಾ ದೇಶವೊಂದರ ನಾಗರಿಕರಿಗೆ ತುಂಬಾ ಕಷ್ಟಕರ ವಿಚಾರವಾಗಿದೆ. ತನ್ನ ದೇಶದ ಪರಂಪರೆಯನ್ನು ಗುರುತಿಸಿ ಗೌರವಿಸುವುದು ಒಬ್ಬ ಮಹಾನ್ ನಾಯಕನ ಲಕ್ಷಣ. ಪ್ರಧಾನಿ ನರೇಂದ್ರ ಮೋದಿ ಅವರ ದೇಶವನ್ನು ಗೌರವಿಸುತ್ತಾರೆ ಎಂದು ಸಂದರ್ಶನದಲ್ಲಿ ಮೇರಿ ಮಿಲ್ಬೆನ್ ಹೇಳಿದ್ದಾರೆ.

ಇದನ್ನೂ ಓದಿ: Mary Milben: ರಾಷ್ಟ್ರಗೀತೆ ಹಾಡಿದ ನಂತರ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಅಮೆರಿಕ ಗಾಯಕಿ ಮೇರಿ ಮಿಲ್ಬೆನ್

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದಾಗ ಶ್ವೇತಭವನದಲ್ಲಿ ಮೇರಿ ಮಿಲ್ಬೆನ್ ಅವರು ಭಾರತದ ರಾಷ್ಟ್ರಗೀತೆ ಹಾಡಿದ್ದರು. ನಂತರ ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್