AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ದೇಶದ ಬಗ್ಗೆಯೇ ಒಳ್ಳೆಯ ಮಾತುಗಳನ್ನಾಡದವರನ್ನು ಜನ ಒಪ್ಪುವರೇ; ರಾಹುಲ್ ಗಾಂಧಿ ಬಗ್ಗೆ ಗಾಯಕಿ ಮೇರಿ ಮಿಲ್ಬೆನ್ ಪ್ರಶ್ನೆ

‘ದಿ ನ್ಯೂ ಇಂಡಿಯನ್’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರೋಹನ್ ದುವಾ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿದ ಮೇರಿ ಮಿಲ್ಬೆನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ದೇಶದ ಬಗ್ಗೆಯೇ ಒಳ್ಳೆಯ ಮಾತುಗಳನ್ನಾಡದವರನ್ನು ಜನ ಒಪ್ಪುವರೇ; ರಾಹುಲ್ ಗಾಂಧಿ ಬಗ್ಗೆ ಗಾಯಕಿ ಮೇರಿ ಮಿಲ್ಬೆನ್ ಪ್ರಶ್ನೆ
ಮೇರಿ ಮಿಲ್ಬೆನ್ & ರಾಹುಲ್ ಗಾಂಧಿ
ಗಣಪತಿ ಶರ್ಮಾ
|

Updated on: Jun 30, 2023 | 10:17 PM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿದೇಶಗಳಿಗೆ ಭೇಟಿ ನೀಡಿದಾಗ ಭಾರತದ ಪ್ರಜಾಪ್ರಭುತ್ವ, ಆಡಳಿತ ಇತ್ಯಾದಿ ವಿಚಾರಗಳ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಾಯಕರು ಅವರನ್ನು ಟೀಕಿಸಿರುವುದು ಹಲವು ಬಾರಿ ನಡೆದಿದೆ. ರಾಹುಲ್ ಗಾಂಧಿ (Rahul Gandhi) ಅವರು ವಿದೇಶಗಳಲ್ಲಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ ಎಂದು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಅಮೆರಿಕದ ಶ್ವೇತಭವನದ ಅಧಿಕೃತ ಗಾಯಕಿ ಮೇರಿ ಮಿಲ್ಬೆನ್ (Mary Milben)  ಕೂಡ ರಾಹುಲ್ ಗಾಂಧಿ ವಿರುದ್ಧ ಅಂಥದ್ದೇ ಮಾತುಗಳನ್ನಾಡಿದ್ದು, ತಮ್ಮದೇ ದೇಶದ ಬಗ್ಗೆ ಒಳ್ಳೆಯ ಮಾತುಗಳನ್ನಾಡದವರನ್ನು ಜನ ಒಪ್ಪುವರೇ ಎಂದು ಪ್ರಶ್ನಿಸಿದ್ದಾರೆ.

‘ದಿ ನ್ಯೂ ಇಂಡಿಯನ್’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರೋಹನ್ ದುವಾ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿದ ಮೇರಿ ಮಿಲ್ಬೆನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಬಗ್ಗೆ ಅವರ ಕೆಲವು ಭಾಷಣಗಳನ್ನು ಕೇಳಿದಾಗ ತಿಳಿಯುತ್ತದೆ. ತಮ್ಮದೇ ದೇಶದ ಬಗ್ಗೆ ಒಳ್ಳೆಯ ಮಾತುಗಳನ್ನಾಡದ ನಾಯಕನನ್ನು ಒಪ್ಪಿಕೊಳ್ಳುವುದು ಅಥವಾ ಅವರ ಪರ ಮತ ಚಲಾಯಿಸುವುದು ಯಾವುದೇ ದೇಶಕ್ಕೆ ಅಥವಾ ದೇಶವೊಂದರ ನಾಗರಿಕರಿಗೆ ತುಂಬಾ ಕಷ್ಟಕರ ವಿಚಾರವಾಗಿದೆ. ತನ್ನ ದೇಶದ ಪರಂಪರೆಯನ್ನು ಗುರುತಿಸಿ ಗೌರವಿಸುವುದು ಒಬ್ಬ ಮಹಾನ್ ನಾಯಕನ ಲಕ್ಷಣ. ಪ್ರಧಾನಿ ನರೇಂದ್ರ ಮೋದಿ ಅವರ ದೇಶವನ್ನು ಗೌರವಿಸುತ್ತಾರೆ ಎಂದು ಸಂದರ್ಶನದಲ್ಲಿ ಮೇರಿ ಮಿಲ್ಬೆನ್ ಹೇಳಿದ್ದಾರೆ.

ಇದನ್ನೂ ಓದಿ: Mary Milben: ರಾಷ್ಟ್ರಗೀತೆ ಹಾಡಿದ ನಂತರ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಅಮೆರಿಕ ಗಾಯಕಿ ಮೇರಿ ಮಿಲ್ಬೆನ್

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದಾಗ ಶ್ವೇತಭವನದಲ್ಲಿ ಮೇರಿ ಮಿಲ್ಬೆನ್ ಅವರು ಭಾರತದ ರಾಷ್ಟ್ರಗೀತೆ ಹಾಡಿದ್ದರು. ನಂತರ ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ