ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ: ನಿಯಂತ್ರಿಸಲು ಹರಸಾಹಸ
ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, 4 ವಿಶೇಷ ಕೌಂಟರ್ಗಳನ್ನು ತೆರೆಯಲಾಗಿದೆ. ಇದೀಗ ಮೈಸೂರಿನ ಜಯದೇವ ಆಸ್ಪತ್ರೆಗೆ ಜನಸಾಗರವೇ ಹರಿದುಬರುತ್ತಿದೆ. ಬುಧವಾರ ಬೆಳಗ್ಗೆಯೇ ಸಾವಿರಾರು ಜನರು ಆಸ್ಪತ್ರೆಗೆ ಬಂದು ಗೊಂದಲ ಸೃಷ್ಟಿಯಾಯಿತು. ವಿಡಿಯೋ ಇಲ್ಲಿದೆ ನೋಡಿ.
ಮೈಸೂರು, ಜುಲೈ 9: ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಜನರ ನಿದ್ದೆಗೆಡಿಸಿದೆ. ಪರಿಣಾಮವಾಗಿ ಹೃದಯದ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದ್ದು, ಜನರನ್ನು ನಿಯಂತ್ರಿಸುವುದೇ ವೈದ್ಯಕೀಯ ಸಿಬ್ಬಂದಿಗೆ ಸವಾಲಾಗುತ್ತಿದೆ. ಮೈಸೂರಿನ ಜಯದೇವ ಆಸ್ಪತ್ರೆಗೆ ಬುಧವಾರ ಬೆಳ್ಳಂಬಳಗ್ಗೆಯೇ ಸಾವಿರಾರು ಜನ ಆಗಮಿಸಿದ್ದಾರೆ. ಆತಂಕ ಬೇಡ ಎಂದು ವೈದ್ಯರು ಹೇಳಿದ್ದರೂ ಸಾವಿರಾರು ಜನರು ಆಸ್ಪತ್ರೆ ಹೊರಗೆ ಸಾಲುಗಟ್ಟಿ ನಿಂತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
