ನೆಲಮಂಗಲ: ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು

Updated on: May 13, 2025 | 2:30 PM

ನೆಲಮಂಗಲದ ಅಡಕಮಾರನಹಳ್ಳಿ ಸಮೀಪ ಸೋಮವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕದಳದ 20ಕ್ಕೂ ಹೆಚ್ಚು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಆದಾಗ್ಯೂ ಬೆಂಕಿ ನಂದಿಸುವುದು ಸಾಧ್ಯವಾಗಿಲ್ಲ. ಅಡಕಮಾರನಹಳ್ಳಿಯಲ್ಲಿ ಸಂಭವಿಸಿದ ಭಯಾನಕ ಬೆಂಕಿ ಅವಘಡದ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಮೇ 13: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್​ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಸುಮಾರು 40 ಸಾವಿರ ಅಡಿಯ ಗೋದಾಮಿನಲ್ಲಿ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದ್ದು, ಸುಮಾರು 30 ಕೋಟಿ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. ಮಾಜಿ ಸಚಿವ ಎಚ್​​ಸಿ ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪಗೆ ಸೇರಿದ ಗೋದಾಮು ಇದಾಗಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.

ವಿಡಿಯೋ ಮತ್ತು ವರದಿ: ಮಂಜುನಾಥ್ ನೆಲಮಂಗಲ, ಟಿವಿ9

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 13, 2025 08:47 AM