ಕುಮಾರಸ್ವಾಮಿ ರೋಡ್ ಶೋ ಕಂಡು ವಿರೋಧ ಪಕ್ಷದ ನಾಯಕರು ಹೆದರಿದ್ದರೆ ಆಶ್ಚರ್ಯವಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Oct 25, 2024 | 2:24 PM

ನಿನ್ನೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ರೋಡ್ ಶೋನಲ್ಲೂ ಜನವಿದ್ದರು ಆದರೆ ಈ ಪ್ರಮಾಣದಲ್ಲಿ ಅಲ್ಲ. ಇವತ್ತು ಜನರ ಕೈಯಲ್ಲಿ ಜೆಡಿಎಸ್ ಧ್ವಜಗಳು ರಾರಾಜಿಸುತ್ತಿದ್ದವು. ನಿಖಿಲ್ ಎನ್​ಡಿಎ ಅಭ್ಯರ್ಥಿಯಾಗಿದ್ದರೂ ಬಿಜೆಪಿಯ ಧ್ವಜಗಳು ಹೆಚ್ಚು ಕಾಣಿಸಲಿಲ್ಲ. ಯೊಗೇಶ್ವರ್​ಗೆ ಟಿಕೆಟ್ ಕೊಡದಿರುವುದಕ್ಕೆ ಅವರು ಮುನಿಸಿಕೊಂಡಿದ್ದಾರೆಯೇ?

ರಾಮನಗರ: ಈ ವಿಡಿಯೋ ನಿಸ್ಸಂದೇಹವಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಿಕೆ ಸುರೇಶ್ ಮತ್ತು ಸಿಪಿ ಯೋಗೇಶ್ವರ್ ಮೊದಲಾದವರನ್ನು ಕಳವಳಗೊಳ್ಳುವಂತೆ ಮಾಡುತ್ತದೆ. ಇವತ್ತು ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೊದಲು ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರೋಡ್​ ಶೋನಲ್ಲಿ ಜನ ಸಾಗರದಂತೆ ಹರಿದು ಬಂದರು. ಎತ್ತ ನೋಡಿದರೂ ಜನ! ತೆರೆದ ವಾಹನದಲ್ಲಿ ಆರ್ ಅಶೋಕ್, ಯದುವೀರ್ ಕೃಷ್ಣದತ್ ಒಡೆಯರ್, ಡಾ ಸಿಎನ್ ಅಶ್ವಥ್ ನಾರಾಯಣ, ಡಾ ಕೆ ಸುಧಾಕರ್, ಡಿವಿ ಸದಾನಂದಗೌಡ ಮೊದಲಾದವರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.