AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ಕಾಮಿಡಿ ಕಿಲಾಡಿಗಳು’ ಟೀಂರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ಕಾಮಿಡಿ ಕಿಲಾಡಿಗಳು’ ಟೀಂ

ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ಕಾಮಿಡಿ ಕಿಲಾಡಿಗಳು’ ಟೀಂ

ರಾಜೇಶ್ ದುಗ್ಗುಮನೆ
|

Updated on:May 13, 2025 | 12:14 PM

Share

‘ಕಾಮಿಡಿ ಕಿಲಾಡಿಗಳು ಸೀಸನ್ 3’ ಶೋನ ವಿನ್ನರ್ ಆಗಿದ್ದರು ರಾಕೇಶ್ ಪೂಜಾರಿ ಅವರು ನಿಧನ ಹೊಂದಿರೋದು ನಿಜಕ್ಕೂ ಶಾಕಿಂಗ್ ವಿಚಾರ. ಈ ತಂಡದ ಅನೇಕರಿಗೆ ಈ ವಿಚಾರ ನಿಜಕ್ಕೂ ಶಾಕ್ ತಂದಿದೆ. ಈಗ ಅವರು ಒಂದು ವಿಚಾರದ ಬಗ್ಗೆ ಮಾತನಾಡಿದ್ದಾರೆ  .

ರಾಕೇಶ್ ಪೂಜಾರಿ (Rakesh Poojary) ನಿಧನ ಹೊಂದಿದ್ದಾರೆ. ತಂಗಿ ಮದುವೆ ಮಾಡಬೇಕು ಎಂಬುದು ಅವರ ಕನಸಾಗಿತ್ತು. ಈ ಕನಸನ್ನು ನನಸು ಮಾಡಲು ‘ಕಾಮಿಡಿ ಕಿಲಾಡಿಗಳು’ ಟೀಂ ರೆಡಿ ಆಗಿದೆ. ಈ ಬಗ್ಗೆ ಮಾಸ್ಟರ್ ಆನಂದ್ ಮಾತನಾಡಿದ್ದಾರೆ.  ‘ರಾಕೇಶ್ ಟೆಡ್ಡಿಬೇರ್ ತರಹ ಇದ್ದ. ಎಲ್ಲರಿಗೂ ಇಷ್ಟ ಆಗ್ತಿದ್ದ. ನಿನ್ನೆ ಎಲ್ಲೋ ಖುಷಿಯಾಗಿ ಇದ್ದೆವು. ಆದರೆ, ಈಗ ಈಗ ದುಃಖದಲ್ಲಿ ನಿಂತಿದ್ದೇವೆ. ಒಳ್ಳೊಳ್ಳೆಯ ಆಫರ್ ಬರುತ್ತಾ ಇತ್ತು. ಒಳ್ಳೊಳ್ಳೆಯ ಸಿನಿಮಾ ಮಾಡ್ತಾ ಇದ್ದ. ತಂಗಿ ಮದುವೆ ಮಾಡಬೇಕು ಎಂಬುದು ಕನಸಾಗಿತ್ತು. ಅದನ್ನು ನಾವು ಮಾಡುತ್ತೇವೆ. ಕೈಲಾಸ ತಂದು ಇಟ್ಟರೂ ಅವನ ತಂಗಿಗೆ ಖುಷಿ ಆಗೋದಿಲ್ಲ. ಅಣ್ಣ ಇಲ್ಲ ಎಂಬ ನೋವು ಸದಾ ಇರುತ್ತದೆ. ಆದರೆ, ನಮ್ಮ ಕೈಲಾದದ್ದನ್ನು ಮಾಡುತ್ತೇವೆ. ಅವನು ಅಲ್ಲಿಂದ ಹರಸಲಿ ಎಂಬ ನಿಟ್ಟಲ್ಲಿ ಮಾಡಬೇಕು’ ಎಂದಿದ್ದಾರೆ ಆನಂದ್. ಮಾಸ್ಟರ್ ಆನಂದ್ ಅವರು ಈ ಮೊದಲು ‘ಕಾಮಿಡಿ ಕಿಲಾಡಿಗಳು’ ಶೋಗೆ ನಿರೂಪಕರಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 13, 2025 11:54 AM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More