ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್ ಕಣ್ಣೀರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೆನೆದು ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಸಿದ್ದರಾಮಯ್ಯ ಎಲ್ಲಾ ವರ್ಗಗಳನ್ನು ಸಮಾನವಾಗಿ ಕಂಡ, ಬಡವರ ಬಗ್ಗೆ ಕಾಳಜಿ ಹೊಂದಿದ್ದ ನಾಯಕ ಎಂದು ಅವರು ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಉಳಿದು, ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡುವ ಮೂಲಕ 2028ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.
ದಾವಣಗೆರೆ, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ದಾವಣಗೆರೆಯಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯರನ್ನು ಕಳೆದ 2-3 ದಿನಗಳಿಂದ ನೋಡಲು ಆಗುತ್ತಿಲ್ಲ. ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದ ನಾಯಕರಾಗಿದ್ದು, ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಹಿನ್ನೆಲೆ ಸಂಪುಟ ವಿಸರ್ಜನೆಗೊಂಡಿದ್ದು, ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
