ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ ಖುರೇಶಿ
ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನವು ಭಾರತದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಒಂದು ಕಡೆ ಕ್ಷಿಪಣಿ ಹಾಗೂ ಡ್ರೋಣಿ ದಾಳಿ ನಡೆಸಿದ್ರೆ, ಮತ್ತೊಂದೆಡೆ ಪಿಓಕೆಯಲ್ಲಿ ಪಾಕ್ ಸೇನೆ ನಿರಂತರ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ. ಆದರೂ ತಾವು ಯಾವುದೇ ದಾಳಿ ಮಾಡಿಲ್ಲ ಎನ್ನುವ ಮಾತುಗಳನ್ನಾಡುತ್ತಿದ್ದು, ಇದೀಗ ಇದಕ್ಕೆ ಭಾರತ ವಿದೇಶಾಂಗ ಸಚಿವಾಲಯ ಹಾಗೂ ಸೇನಾಪಡೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟಿದ್ದಾರೆ.
ನವದೆಹಲಿ (ಮೇ.9): ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನವು ಭಾರತದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಒಂದು ಕಡೆ ಕ್ಷಿಪಣಿ ಹಾಗೂ ಡ್ರೋಣಿ ದಾಳಿ ನಡೆಸಿದ್ರೆ, ಮತ್ತೊಂದೆಡೆ ಪಿಓಕೆಯಲ್ಲಿ ಪಾಕ್ ಸೇನೆ ನಿರಂತರ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ. ಆದರೂ ತಾವು ಯಾವುದೇ ದಾಳಿ ಮಾಡಿಲ್ಲ ಎನ್ನುವ ಮಾತುಗಳನ್ನಾಡುತ್ತಿದ್ದು, ಇದೀಗ ಇದಕ್ಕೆ ಭಾರತ ವಿದೇಶಾಂಗ ಸಚಿವಾಲಯ ಹಾಗೂ ಸೇನಾಪಡೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟಿದ್ದಾರೆ.
ದೆಹಲಿಯಲ್ಲಿ ಇಂದು (ಮೇ 09) ಸಂಹೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕರ್ನಲ್ ಸೋಫಿಯಾ ಖುರೇಶಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ದಾಳಿ ಬಗ್ಗೆ ಹಾಗೂ ಇದಕ್ಕೆ ಭಾರತದ ಪ್ರತಿದಾಳಿ ಮಾಡಿವು ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.