ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ಜಿಬಿಎ ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸೂಚನೆ ನೀಡಿದ್ದು, ಹಬ್ಬದ ದಿನದಂದು ಯಾವುದೇ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.
ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

