ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ

Updated on: Feb 13, 2026 | 2:23 PM

ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ಜಿಬಿಎ ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸೂಚನೆ ನೀಡಿದ್ದು, ಹಬ್ಬದ ದಿನದಂದು ಯಾವುದೇ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us