Bengaluru: ಸೋಮಣ್ಣ ವಿಷಯ ಮಾತಾಡುವಾಗ ಬಿಎಸ್ ಯಡಿಯೂರಪ್ಪ ಅದ್ಯಾಕೆ ವಿಜೆಯೇಂದ್ರನ ಹೆಸರು ಉಲ್ಲೇಖಿಸಿದರೋ?

ಅರುಣ್​ ಕುಮಾರ್​ ಬೆಳ್ಳಿ

Updated on: Mar 16, 2023 | 12:15 PM

ಅವರನ್ನು ಯಾವತ್ತೂ ಕಡೆಗಣನೆ ಮಾಡಿಲ್ಲ, ಇನ್ನು ಮುಂದೆ ಅವರೂ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ, ವಿಜಯೇಂದ್ರ ಸಹ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು: ವಿ ಸೋಮಣ್ಣ (V Somanna) ಕುರಿತು ಬೆಂಗಳೂರಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಬಿಎಸ್ ಯಡಿಯೂರಪ್ಪನವರು (BS Yediyurappa), ಸಚಿವರನ್ನು ಪಕ್ಷದ ವರಿಷ್ಠರು ದೆಹಲಿಗೆ ಕರೆಸಿ ಮಾತಾಡಿದ್ದಾರೆ, ಎಲ್ಲ ಸಮಸ್ಯೆಗಳನ್ನು ನಿವಾರಿಸಿದ್ದಾರೆ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು. ತಾನು ಅವರೊಂದಿಗೆ ಮಾತಾಡದೆ, ಭೇಟಿಯಾಗದೆ ಮೂರು ತಿಂಗಳಾಗಿದೆ, ತನ್ನ ಜೊತೆಯೇ ಅವರಿದ್ದರು ಅಂತ ಹೇಳೋದು ಸರಿಯಲ್ಲ, ಅವರನ್ನು ಕಡೆಗಣನೆ ಯಾವತ್ತೂ ಮಾಡಿಲ್ಲ, ಇನ್ನು ಮುಂದೆ ಅವರೂ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ, ವಿಜಯೇಂದ್ರ (BY Vijayendra) ಸಹ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದರು. ಸೋಮಣ್ಣ ವಿಷಯ ಮಾತಾಡುವಾಗ ಮಾಜಿ ಮುಖ್ಯಮಂತ್ರಿಗಳು ಅದ್ಯಾಕೆ ವಿಜಯೇಂದ್ರ ಹೆಸರು ಉಲ್ಲೇಖಿಸಿದರೆಂದು ಅರ್ಥವಾಗಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.