ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದರೆ ಕಾಂಗ್ರೆಸ್ ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ, ಬಿಜೆಪಿ ನಾಯಕ
ಮಲ್ಲಿಕಾರ್ಜುನ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೊದಲಾದವರೆಲ್ಲ ಸರ್ಕಾರದ ಭಾಗವಾಗಿದ್ದಾರೆ, ಕ್ಷೇತ್ರದ ಕೆಲಸಗಳ ಸಲುವಾಗಿ ಅವರನ್ನು ಭೇಟಿಯಾಗಬೇಕಾಗುತ್ತದೆ, ಭೇಟಿ ಮಾಡಿದಾಕ್ಷಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆ ಅಂತ ಭಾವಿಸುವುದು ತಪ್ಪು ಎಂದು ರೇಣುಕಾಚಾರ್ಯ ಹೇಳಿದರು.
ದಾವಣಗೆರೆ: ಬಿಎಸ್ ಯಡಿಯೂರಪ್ಪ (BS Yediyurappa) ಅದರ್ಶ ಅನ್ನುತ್ತಲೇ ಕಾಂಗ್ರೆಸ್ ಕಡೆ ಮುಖಮಾಡಿ ನಿಂತಿದ್ದೀರಲ್ಲ ಅಂತ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಕೋಪಗೊಂಡರು. ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ಹೋಗುವುದು, ಕಾಂಗ್ರೆಸ್ ನಾಯಕರನ್ನು ಭೇಟಿಯಾಗುವುದರ ಅರ್ಥ ಕಾಂಗ್ರೆಸ್ ಪಕ್ಷ ಸೇರ್ತಿದ್ದೀನಿ ಅಂತಲ್ಲ ಎಂದು ಅವರು ಹೇಳಿದರು. ಎಸ್ ಎಸ್ ಮಲ್ಲಿಕಾರ್ಜುನ (SS Mallikarjun) ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ, ಅಡಕೆ ಬೆಳೆ ನಶಿಸುತ್ತಿರವುದರಿಂದ ಭದ್ರಾನಾಲೆಗೆ ನೀರು ಹರಿಸುವಂತೆ ಮನವಿ ಮಾಡಲು ಅವರಲ್ಲಿಗೆ ಹೋಗಿದ್ದಾಗಿ ರೇಣುಕಾಚಾರ್ಯ ಹೇಳಿದರು, ಮಲ್ಲಿಕಾರ್ಜುನ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೊದಲಾದವರೆಲ್ಲ ಸರ್ಕಾರದ ಭಾಗವಾಗಿದ್ದಾರೆ, ಕ್ಷೇತ್ರದ ಕೆಲಸಗಳ ಸಲುವಾಗಿ ಅವರನ್ನು ಭೇಟಿಯಾಗಬೇಕಾಗುತ್ತದೆ, ಭೇಟಿ ಮಾಡಿದಾಕ್ಷಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆ ಅಂತ ಭಾವಿಸುವುದು ತಪ್ಪು ಎಂದು ರೇಣುಕಾಚಾರ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!

