ಚುನಾವಣೆ ಗೆದ್ದ ಪವನ್​ ಕಲ್ಯಾಣ್​ಗೆ ಚಿರಂಜೀವಿ ಮನೆಯಲ್ಲಿ ಅದ್ದೂರಿ ಸ್ವಾಗತ; ವಿಡಿಯೋ ನೋಡಿ..

ಪವನ್​ ಕಲ್ಯಾಣ್​ ಅವರು ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಹೈದರಾಬಾದ್​ಗೆ ಮರಳಿದ್ದಾರೆ. ಬಳಿಕ ಅವರು ಸಹೋದರ ಮೆಗಾ ಸ್ಟಾರ್​ ಚಿರಂಜೀವಿ ನಿವಾಸಕ್ಕೆ ಬಂದಿದ್ದಾರೆ. ಅಲ್ಲಿ ಪವನ್​ ಕಲ್ಯಾಣ್​ಗೆ ವೈಭವದ ಸ್ವಾಗತ ನೀಡಲಾಗಿದೆ. ಹೂವಿನ ಮಳೆ ಸುರಿಸಲಾಗಿದೆ. ತಮ್ಮನಿಗೆ ಚಿರಂಜೀವಿ ಹಾರ ಹಾಕಿದ್ದಾರೆ. ಅಣ್ಣನ ಕಾಲಿಗೆ ಬಿದ್ದು ಪವನ್​ ಕಲ್ಯಾಣ್​ ಅವರು ಆಶೀರ್ವಾದ ಪಡೆದ ವಿಡಿಯೋ ಇಲ್ಲಿದೆ..

ಚುನಾವಣೆ ಗೆದ್ದ ಪವನ್​ ಕಲ್ಯಾಣ್​ಗೆ ಚಿರಂಜೀವಿ ಮನೆಯಲ್ಲಿ ಅದ್ದೂರಿ ಸ್ವಾಗತ; ವಿಡಿಯೋ ನೋಡಿ..
|

Updated on: Jun 06, 2024 | 10:04 PM

ಟಾಲಿವುಡ್​ ನಟ ಪವನ್ ಕಲ್ಯಾಣ್​ (Pawan Kalyan) ಅವರು ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಅವರ ಜನಸೇನಾ ಪಕ್ಷ ವಿಜಯ ಪತಾಕೆ ಹಾರಿಸಿದೆ. ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಪವನ್​ ಕಲ್ಯಾಣ್​ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಪವನ್​ ಕಲ್ಯಾಣ್​ ಅವರು ಹೈದರಾಬಾದ್​ಗೆ ಮರಳಿದ್ದಾರೆ. ನಂತರ ಅವರು ಸಹೋದರ ಮೆಗಾ ಸ್ಟಾರ್​ ಚಿರಂಜೀವಿ (Mega Star Chiranjeevi) ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ಪವನ್​ ಕಲ್ಯಾಣ್​ ಅವರಿಗೆ ಭರ್ಜರಿ ಸ್ವಾಗತ ನೀಡಲಾಗಿದೆ. ಅವರ ಮೇಲೆ ಹೂವಿನ ಮಳೆ ಸುರಿಸಲಾಗಿದೆ. ಗೆದ್ದು ಬಂದ ತಮ್ಮನಿಗೆ ಚಿರಂಜೀವಿ ಅವರು ಹಾರ ಹಾಕಿದ್ದಾರೆ. ಆರತಿ ಎತ್ತಿ, ತಿಲಕ ಇಟ್ಟು ಪವನ್​ ಕಲ್ಯಾಣ್​ ಅವರನ್ನು ಬರಮಾಡಿಕೊಳ್ಳಲಾಗಿದೆ. ಅಣ್ಣನ ಕಾಲಿಗೆ ನಮಸ್ಕರಿಸಿದ ಪವನ್​ ಕಲ್ಯಾಣ್​ ಅವರು ಆಶೀರ್ವಾದ ಪಡೆದಿದ್ದಾರೆ. ಇಡೀ ಫ್ಯಾಮಿಲಿಯಲ್ಲಿ ಸಂಭ್ರಮ ಮನೆ ಮಾಡಿದೆ. ಈ ವೇಳೆ ರಾಮ್​ ಚರಣ್​ ಕೂಡ ಪವನ್​ ಕಲ್ಯಾಣ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ (Pawan Kalyan Viral Video) ನೋಡಿದ ಮೆಗಾ ಫ್ಯಾಮಿಲಿಯ ಅಭಿಮಾನಿಗಳು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್