ಮಕ್ಕಳು, ಮಹಿಳೆಯರ ತಪ್ಪೇನು? ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ

Updated on: May 09, 2025 | 4:09 PM

ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗಳನ್ನು ಕೊನೆಗೊಳಿಸಬೇಕೆಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ. ಎರಡೂ ದೇಶಗಳು ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಶಾಂತಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವತ್ತ ಯೋಚಿಸಬೇಕು. ಇಲ್ಲದಿದ್ದರೆ ಅನ್ಯಾಯವಾಗಿ ಮಹಿಳೆಯರು, ಮಕ್ಕಳು, ವೃದ್ಧರು, ಅಮಾಯಕರು ಜೀವ ಕಳೆದುಕೊಳ್ಳಬೇಕಾಗುತ್ತದೆ. ಈ ಗುಂಡಿನ ಚಕಮಕಿಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಇದರಲ್ಲಿ ಅವರ ತಪ್ಪೇನು? ಮಿಲಿಟರಿ ಕಾರ್ಯಾಚರಣೆಯು ಎಂದಿಗೂ ಪರಿಹಾರ ಅಥವಾ ಶಾಂತಿಯನ್ನು ಒದಗಿಸುವುದಿಲ್ಲ" ಎಂದು ಹೇಳಿದ್ದಾರೆ.

ಶ್ರೀನಗರ, ಮೇ 9: ಭಾರತ ಮತ್ತು ಪಾಕಿಸ್ತಾನದ (India-Pakistan Tensions) ನಡುವೆ ವೈಮಾನಿಕ ದಾಳಿ ನಡೆಯುತ್ತಲೇ ಇದೆ. ಇದರಿಂದ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ಪರಿಹರಿಸಲು ಒತ್ತಾಯಿಸುತ್ತಾ ಭಾವುಕರಾಗಿದ್ದಾರೆ. ಎರಡೂ ದೇಶಗಳು ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಶಾಂತಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವತ್ತ ಯೋಚಿಸಬೇಕು. ಇಲ್ಲದಿದ್ದರೆ ಅನ್ಯಾಯವಾಗಿ ಮಹಿಳೆಯರು, ಮಕ್ಕಳು, ವೃದ್ಧರು, ಅಮಾಯಕರು ಜೀವ ಕಳೆದುಕೊಳ್ಳಬೇಕಾಗುತ್ತದೆ. ಈ ಗುಂಡಿನ ಚಕಮಕಿಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಇದರಲ್ಲಿ ಅವರ ತಪ್ಪೇನು? ಮಿಲಿಟರಿ ಕಾರ್ಯಾಚರಣೆಯು ಎಂದಿಗೂ ಪರಿಹಾರ ಅಥವಾ ಶಾಂತಿಯನ್ನು ಒದಗಿಸುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More