AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

ದಿಲೀಪ್​, ಚೌಡಹಳ್ಳಿ
| Edited By: |

Updated on:Jun 21, 2026 | 11:15 AM

Share

ಮೇಕೆದಾಟು ಯೋಜನೆಗೆ ತಮಿಳುನಾಡಿನ ನಿರಂತರ ಆಕ್ಷೇಪಗಳಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಕ್ಕಾಗಿ ಈ ಯೋಜನೆ ನಿರ್ಣಾಯಕವಾಗಿದೆ. ದೇವೇಗೌಡರ ನಾಯಕತ್ವದಲ್ಲಿ ಪ್ರಧಾನಿಗಳಿಗೆ ಮನವಿ ಸಲ್ಲಿಸಿದ್ದರೂ, ತಮಿಳುನಾಡು ಸಹಮತ ನೀಡುತ್ತಿಲ್ಲ. ರಾಜಕೀಯ ಪ್ರತಿಷ್ಠೆ ಬದಿಗಿಟ್ಟು ಸಹೋದರತ್ವದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಂಡ್ಯ, ಜೂನ್​​ 21: ಮೇಕೆದಾಟು ಯೋಜನೆಗೆ ತಮಿಳುನಾಡು ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಕುಡಿಯುವ ನೀರಿಗಾಗಿ ಮಾಡಲಾಗುತ್ತಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸಹಮತ ಕೊಡಬೇಕು‌.ರಾಜಕೀಯ, ಪ್ರತಿಷ್ಠೆಗಾಗಿ ಅಲ್ಲಿನ ಪಕ್ಷಗಳು ದಬ್ಬಾಳಿಕೆ ಮಾಡಬಾರದು. ಈ ಕ್ಯಾತೆ 50 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಉತ್ತಮ ಮಳೆಯಾದಾಗ ಕರ್ನಾಟಕವು ನ್ಯಾಯಮಂಡಳಿ ಆದೇಶಕ್ಕಿಂತಲೂ ಎರಡು ಪಟ್ಟು ಹೆಚ್ಚು ನೀರನ್ನು ಬಿಡುಗಡೆ ಮಾಡಿದೆ. ಆದರೆ ನಮ್ಮಲ್ಲಿಯೇ ಜಲಾಶಯಗಳು ಭರ್ತಿಯಾಗದಿದ್ದಾಗಲೂ ನೀರಿಗಾಗಿ ಒತ್ತಾಯಿಸುವುದು ಸೂಕ್ತವಲ್ಲ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 21, 2026 11:15 AM

Follow Us