AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ದಿಲೀಪ್​, ಚೌಡಹಳ್ಳಿ
| Edited By: |

Updated on:Mar 29, 2026 | 9:30 AM

Share

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಶ್ರೀದೇವಿ ಮತ್ತು ಭೂದೇವಿ ಸಹಿತ ರತ್ನಖಚಿತ ವೈರಮುಡಿ ಕಿರೀಟ ಧರಿಸಿ ಚಲುವನಾರಾಯಣಸ್ವಾಮಿಯು ಸಹಸ್ರಾರು ಭಕ್ತರಿಗೆ ದರ್ಶನ ನೀಡಿದರು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತರು ನೆರೆದಿದ್ದರು.

ಮಂಡ್ಯ, ಮಾರ್ಚ್​​ 29: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ದೇವಾಲಯದ ಆವರಣವು ಭಕ್ತಿ-ಭಾವಗಳಿಂದ ತುಂಬಿ ತುಳುಕುತ್ತಿತ್ತು. ಭಕ್ತರು ಜೈ ಚಲುವನಾರಾಯಣಸ್ವಾಮಿ ಎಂದು ಜಯಘೋಷಗಳನ್ನು ಕೂಗುತ್ತಾ, ತಮ್ಮ ಇಷ್ಟದ ದೇವರ ದರ್ಶನ ಪಡೆದು ಪುನೀತರಾದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Mar 29, 2026 09:30 AM
Follow Us