AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸನಗೌಡ ಯತ್ನಾಳ್ ವಿರುದ್ಧ ವಿಜಯಪುರ ಮುಸ್ಲಿಂ ಸಮುದಾಯದ ಪ್ರತಿಭಟನೆ, ಬಂಧಿಸಲು ಆಗ್ರಹ

ಬಸನಗೌಡ ಯತ್ನಾಳ್ ವಿರುದ್ಧ ವಿಜಯಪುರ ಮುಸ್ಲಿಂ ಸಮುದಾಯದ ಪ್ರತಿಭಟನೆ, ಬಂಧಿಸಲು ಆಗ್ರಹ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 28, 2025 | 12:15 PM

ಪ್ರತಿಭಟನೆ ಪ್ರಯುಕ್ತ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಮಾರು 500 ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಪ್ರತಿಭಟನೆ ಮುಂದಾಳತ್ವ ವಹಿಸಿರುವ ಕೆಲ ಮುಖಂಡರು ಟಿವಿ9 ಜೊತೆ ಮಾತಾಡಿದ್ದಾರೆ.

ವಿಜಯಪುರ, ಏಪ್ರಿಲ್ 28: ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾಜದ ಕದಡುತ್ತಿದ್ದಾರೆ, ಅವರನ್ನು ಜೈಲಿಗೆ ಹಾಕಿದಲ್ಲಿ ಮಾತ್ರ ರಾಜ್ಯ ಶಾಂತಿಯುತವಾಗಿರುತ್ತದೆ ಎಂದು ವಿಜಯಪುರದ ಮುಸ್ಲಿಂ ಸಮುದಾಯ (Muslim community) ನಗರದಲ್ಲಿಂದು ಪ್ರತಿಭಟನೆ ನಡೆಸುತ್ತಿದೆ. ಮುಸ್ಲಿಂ ಮುಖಂಡರು, ಧರ್ಮಗುರುಗಳು ಮತ್ತು ಸಮುದಾಯದ ಅನೇಕ ಸದಸ್ಯರು ಪ್ರತಿಭಟನೆಯಲ್ಲಿ ಭಾಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮವೊಂದರಲ್ಲಿ ಯತ್ನಾಳ್ ಅವರು ಪ್ರವಾದಿ ಮಹಮ್ಮದ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿರುವುದಕ್ಕೆ ಪ್ರತಿಭಟನೆ ನಡೆಸುತ್ತಿರುವ ಮುಸಲ್ಮಾನರು, ಕಳೆದ ವಾರ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಡಿದವರಿಗಾಗಿಯೂ ಸಂತಾಪ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:   ನನ್ನ ಉಚ್ಚಾಟನೆ ನಂತರ ಬಿಜೆಪಿಯಲ್ಲಿ ಒಗ್ಗಟ್ಟು ಕಂಡುಬರುತ್ತಿದೆ ಅನ್ನೋದು ಸುಳ್ಳು: ಬಸನಗೌಡ ಯತ್ನಾಳ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ