AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳು ರದ್ದು: ಏರ್‌ಲೈನ್ಸ್‌ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಆಕ್ರೋಶ

ಬೆಂಗಳೂರಿನಿಂದ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳು ರದ್ದು: ಏರ್‌ಲೈನ್ಸ್‌ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಆಕ್ರೋಶ

ನವೀನ್ ಕುಮಾರ್ ಟಿ
| Edited By: |

Updated on: Jul 19, 2024 | 7:08 PM

Share

ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿವಿಧೆಡೆಗೆ ತೆರಳಬೇಕಿದ್ದ 21 ಇಂಡಿಗೋ ವಿಮಾನಗನ್ನು ರದ್ದು ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ಕಡೆಗಳಿಗೆ ತೆರಳಲಾಗದೆ ಪ್ರಯಾಣಿಕರು ಪರದಾಡಿದ್ದಾರೆ. ಏರ್‌ಲೈನ್ಸ್‌ ಸಿಬ್ಬಂದಿ ಸೇರಿ ಯಾರೊಬ್ಬರೂ ಸ್ಪಂದಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜುಲೈ 19: ವಿಶ್ವದಾದ್ಯಂತ ಮೈಕ್ರೋಸಾಫ್ಟ್​ನಲ್ಲಿ ತಾಂತ್ರಿಕ ದೋಷ (Microsoft’s Cloud Service Problem) ಕಂಡುಬಂದಿದೆ. ಹೀಗಾಗಿ ವಿಮಾನ ಸಂಚಾರದಲ್ಲಿ, ರೈಲು ಸಂಚಾರದಲ್ಲಿ, ಬ್ಯಾಂಕಿಂಗ್, ಷೇರು ಪೇಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ಅರದಲ್ಲೂ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿವಿಧೆಡೆಗೆ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳನ್ನು ರದ್ದು ಮಾಡಲಾಗಿದೆ. ಹೀಗಾಗಿ ಅಕ್ಷರಶಃ ಪ್ರಯಾಣಿಕರು ಪರದಾಡಿದ್ದಾರೆ. ಈ ಬಗ್ಗೆ ಏರ್‌ಲೈನ್ಸ್‌ ಸಿಬ್ಬಂದಿ ಸೇರಿದಂತೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲವೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಏರ್‌ಲೈನ್ಸ್‌ ಕಚೇರಿಯಲ್ಲಿ ಮಾಹಿತಿ ಪಡೆಯಲು ಗಂಟೆಗಟ್ಟಲೇ ಕ್ಯೂ ನಿಲ್ಲಬೇಕಾಗಿದ್ದು, ಯಾವ ಫ್ಲೈಟ್ ರದ್ದಾಗಿದೆ, ಯಾವುದು ಸಿದ್ಧವಿದೆ ಎಂಬ ಬಗ್ಗೆ ಮಾಹಿತಿ ಕೂಡ ಕೊಡಿಲ್ಲವಂತೆ. ಹಾಗಾಗಿ ಇಂಡಿಗೋ ಏರ್‌ಲೈನ್ಸ್‌ ಸಿಬ್ಬಂದಿಯ ವಿರುದ್ಧ ಪ್ರಯಾಣಿಕರು ಗರಂ ಆಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More