ಮಧ್ಯಪ್ರಾಚ್ಯ ಯುದ್ಧದಿಂದ ಯಾದಗಿರಿಯ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಗಲ್ಫ್ ರಾಷ್ಟ್ರಗಳಿಗೆ ಯಾದಗಿರಿಯಿಂದ ರಫ್ತಾಗುತ್ತಿದ್ದ ಅಕ್ಕಿ ಸಂಪೂರ್ಣ ಸ್ಥಗಿತಗೊಂಡಿದ್ದು, ಜಿಲ್ಲೆಯ ಅನೇಕ ರೈಸ್ ಮಿಲ್ಗಳು ಬಂದ್ ಆಗಿವೆ.ಯಾದಗಿರಿಯ ಸೋನಾ ಮಸೂರಿ ಅಕ್ಕಿಗೆ ಸೌದಿ, ದುಬೈ, ಕುವೈತ್, ಕತಾರ್ ಸೇರಿದಂತೆ ಅನೇಕ ಗಲ್ಫ್ ರಾಷ್ಟ್ರಗಳಲ್ಲಿ ಭಾರಿ ಬೇಡಿಕೆಯಿತ್ತು. ನಿತ್ಯ 3 ಸಾವಿರಕ್ಕೂ ಹೆಚ್ಚು ಕ್ವಿಂಟಾಲ್ ಅಕ್ಕಿ ಇಲ್ಲಿಂದ ರಫ್ತಾಗುತ್ತಿತ್ತು. ಆದರೆ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದಿಂದಾಗಿ ಗಲ್ಫ್ ರಾಷ್ಟ್ರಗಳ ಮೇಲೂ ಪ್ರಭಾವ ಬೀರಿದೆ. ಇದರಿಂದ ಅಕ್ಕಿ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಲಕ್ಷ್ಮಿ ರೈಸ್ ಮಿಲ್ ಮಾಲೀಕ ವಿಜಯ್ ಹೇಳಿದ್ದಾರೆ. ಅವರ ಪ್ರಕಾರ, ಕಳೆದ ಎರಡು ವಾರಗಳಿಂದ ಅಕ್ಕಿ ರಫ್ತು ಸ್ಥಗಿತಗೊಂಡಿದೆ. ಮುಂಬೈ, ಬೆಂಗಳೂರು, ಹೈದರಾಬಾದ್ ಮಹಾನಗರಗಳಲ್ಲೂ ಬೇಡಿಕೆ ಕಡಿಮೆಯಾಗಿದ್ದು, ಮಿಲ್ ಮಾಲೀಕರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ.
ಯಾದಗಿರಿ, ಮಾರ್ಚ್ 12: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಗಲ್ಫ್ ರಾಷ್ಟ್ರಗಳಿಗೆ ಯಾದಗಿರಿಯಿಂದ ರಫ್ತಾಗುತ್ತಿದ್ದ ಅಕ್ಕಿ ಸಂಪೂರ್ಣ ಸ್ಥಗಿತಗೊಂಡಿದ್ದು, ಜಿಲ್ಲೆಯ ಅನೇಕ ರೈಸ್ ಮಿಲ್ಗಳು ಬಂದ್ ಆಗಿವೆ.ಯಾದಗಿರಿಯ ಸೋನಾ ಮಸೂರಿ ಅಕ್ಕಿಗೆ ಸೌದಿ, ದುಬೈ, ಕುವೈತ್, ಕತಾರ್ ಸೇರಿದಂತೆ ಅನೇಕ ಗಲ್ಫ್ ರಾಷ್ಟ್ರಗಳಲ್ಲಿ ಭಾರಿ ಬೇಡಿಕೆಯಿತ್ತು. ನಿತ್ಯ 3 ಸಾವಿರಕ್ಕೂ ಹೆಚ್ಚು ಕ್ವಿಂಟಾಲ್ ಅಕ್ಕಿ ಇಲ್ಲಿಂದ ರಫ್ತಾಗುತ್ತಿತ್ತು. ಆದರೆ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದಿಂದಾಗಿ ಗಲ್ಫ್ ರಾಷ್ಟ್ರಗಳ ಮೇಲೂ ಪ್ರಭಾವ ಬೀರಿದೆ. ಇದರಿಂದ ಅಕ್ಕಿ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಲಕ್ಷ್ಮಿ ರೈಸ್ ಮಿಲ್ ಮಾಲೀಕ ವಿಜಯ್ ಹೇಳಿದ್ದಾರೆ. ಅವರ ಪ್ರಕಾರ, ಕಳೆದ ಎರಡು ವಾರಗಳಿಂದ ಅಕ್ಕಿ ರಫ್ತು ಸ್ಥಗಿತಗೊಂಡಿದೆ. ಮುಂಬೈ, ಬೆಂಗಳೂರು, ಹೈದರಾಬಾದ್ ಮಹಾನಗರಗಳಲ್ಲೂ ಬೇಡಿಕೆ ಕಡಿಮೆಯಾಗಿದ್ದು, ಮಿಲ್ ಮಾಲೀಕರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 12, 2026 01:00 PM
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

