Video: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಲಿನ ಕ್ಯಾನ್ ತಲೆಗೆ ಹಾಕಿಕೊಂಡು ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ
ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ತರಹೇವಾರಿ ಹರಸಾಹಸ ಮಾಡುವುದು ಸಾಮಾನ್ಯ. ಆದರೆ, ಅಲ್ವಾರ್ನ ಮಾಧೋಗಢ ಗ್ರಾಮದ ಕಲೂರಾಮ್ ರೆಬಾರಿ ಎಂಬ ವ್ಯಕ್ತಿ ಮಾಡಿದ ಉಪಾಯ ಮಾತ್ರ ಆತನನ್ನೇ ಸಂಕಷ್ಟಕ್ಕೆ ದೂಡಿತ್ತು. ತಲೆಯ ಮೇಲೆ ಸಿಲುಕಿಕೊಂಡ ಹಾಲಿನ ಕ್ಯಾನ್ನಿಂದಾಗಿ ಎರಡು ಗಂಟೆಗಳ ಕಾಲ ಪರದಾಡಿದ ಘಟನೆ ಈಗ ಬೆಳಕಿಗೆ ಬಂದಿದೆ. ಏಪ್ರಿಲ್ 24ರಂದು ಕಲೂರಾಮ್ ರೆಬಾರಿ ಗೋಧಿ ವಿತರಿಸಲು ಹೋಗುತ್ತಿದ್ದರು. ಅಂದು ಬಿಸಿಲು ವಿಪರೀತವಾಗಿದ್ದರಿಂದ, ತಲೆಗೆ ಬಿಸಿ ತಗುಲಬಾರದೆಂದು ತಮಾಷೆಗಾಗಿ ಅಥವಾ ರಕ್ಷಣೆಗಾಗಿ ಪಕ್ಕದಲ್ಲಿದ್ದ 15 ಲೀಟರ್ ಹಾಲಿನ ಸ್ಟೀಲ್ ಕ್ಯಾನ್ ಅನ್ನು ತಮ್ಮ ತಲೆಯ ಮೇಲೆ ಹಾಕಿಕೊಂಡರು. ಆದರೆ, ಕ್ಯಾನ್ ಒಳಗೆ ಹೋದ ತಲೆ ಹೊರಗೆ ಬರಲೇ ಇಲ್ಲ.
ಅಲ್ವಾರ್, ಏಪ್ರಿಲ್ 26: ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ತರಹೇವಾರಿ ಹರಸಾಹಸ ಮಾಡುವುದು ಸಾಮಾನ್ಯ. ಆದರೆ, ಅಲ್ವಾರ್ನ ಮಾಧೋಗಢ ಗ್ರಾಮದ ಕಲೂರಾಮ್ ರೆಬಾರಿ ಎಂಬ ವ್ಯಕ್ತಿ ಮಾಡಿದ ಉಪಾಯ ಮಾತ್ರ ಆತನನ್ನೇ ಸಂಕಷ್ಟಕ್ಕೆ ದೂಡಿತ್ತು. ತಲೆಯ ಮೇಲೆ ಸಿಲುಕಿಕೊಂಡ ಹಾಲಿನ ಕ್ಯಾನ್ನಿಂದಾಗಿ ಎರಡು ಗಂಟೆಗಳ ಕಾಲ ಪರದಾಡಿದ ಘಟನೆ ಈಗ ಬೆಳಕಿಗೆ ಬಂದಿದೆ.
ಏಪ್ರಿಲ್ 24ರಂದು ಕಲೂರಾಮ್ ರೆಬಾರಿ ಗೋಧಿ ವಿತರಿಸಲು ಹೋಗುತ್ತಿದ್ದರು. ಅಂದು ಬಿಸಿಲು ವಿಪರೀತವಾಗಿದ್ದರಿಂದ, ತಲೆಗೆ ಬಿಸಿ ತಗುಲಬಾರದೆಂದು ತಮಾಷೆಗಾಗಿ ಅಥವಾ ರಕ್ಷಣೆಗಾಗಿ ಪಕ್ಕದಲ್ಲಿದ್ದ 15 ಲೀಟರ್ ಹಾಲಿನ ಸ್ಟೀಲ್ ಕ್ಯಾನ್ ಅನ್ನು ತಮ್ಮ ತಲೆಯ ಮೇಲೆ ಹಾಕಿಕೊಂಡರು. ಆದರೆ, ಕ್ಯಾನ್ ಒಳಗೆ ಹೋದ ತಲೆ ಹೊರಗೆ ಬರಲೇ ಇಲ್ಲ.
ಕೂಡಲೇ ಗ್ರಾಮಸ್ಥರು ಜಮಾಯಿಸಿ ಕ್ಯಾನ್ ತೆಗೆಯಲು ಹರಸಾಹಸ ಪಟ್ಟರು. ಎಣ್ಣೆ ಹಚ್ಚುವುದು, ಸೋಪು ಹಚ್ಚಿ ಎಳೆಯುವುದು ಸೇರಿದಂತೆ ಹಲವು ದೇಸಿ ತಂತ್ರಗಳನ್ನು ಬಳಸಿದರೂ ಕ್ಯಾನ್ ಮಾತ್ರ ಇಂಚೂ ಕದಲಲಿಲ್ಲ. ವಿದ್ಯುತ್ ಚಾಲಿತ ಗ್ರೈಂಡರ್ ಯಂತ್ರವನ್ನು ಬಳಸಿ ಅತ್ಯಂತ ನಾಜೂಕಿನಿಂದ ಕ್ಯಾನ್ ಅನ್ನು ಕತ್ತರಿಸಲು ನಿರ್ಧರಿಸಲಾಯಿತು. ಸ್ವಲ್ಪವೇ ಹೆಚ್ಚುಕಡಿಮೆಯಾದರೂ ವ್ಯಕ್ತಿ ಮುಖಕ್ಕೆ ಗಾಯವಾಗುವ ಅಪಾಯವಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

