AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ

ಬಳ್ಳಾರಿ: ಗಣಿನಾಡು ಬಳ್ಳಾರಿ ಅಂದ್ರೆ ಥಟ್ ಅಂತ ನೆನಪಾಗೋದು ಗಣಿ ಧೂಳು. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಜೆಸಿಬಿ, ಲಾರಿಗಳು ಸದ್ದು ಮಾಡೋದನ್ನ ನೀವು ನೋಡಿದ್ದೀರಾ. ಆದ್ರೆ ಈಗ ಅಲ್ಲಿನ ಆ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನಂತೆ ಗಣಿನಾಡಾಗಿದೆ. ಗಣಿನಾಡು ಬಳ್ಳಾರಿಯಲ್ಲಿ ಮಲೆನಾಡಿನ ಸೌಂದರ್ಯ ಮನೆ ಮಾಡಿದೆ. ಬಳ್ಳಾರಿ ತಾಲೂಕಿನಿಂದ 18 ಕಿಮೀ ದೂರದಲ್ಲಿರುವ ಮಿಂಚೇರಿ ಅರಣ್ಯ ಪ್ರದೇಶ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಈ ವರ್ಷ ಹೆಚ್ಚು ಮಳೆಯಾಗಿದ್ದರಿಂದ ಮಿಂಚೇರಿ ಅರಣ್ಯ ಪ್ರದೇಶ ಈಗ ಪ್ರವಾಸಿಗರನ್ನ […]

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 14, 2020 | 10:46 AM

Share

ಬಳ್ಳಾರಿ: ಗಣಿನಾಡು ಬಳ್ಳಾರಿ ಅಂದ್ರೆ ಥಟ್ ಅಂತ ನೆನಪಾಗೋದು ಗಣಿ ಧೂಳು. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಜೆಸಿಬಿ, ಲಾರಿಗಳು ಸದ್ದು ಮಾಡೋದನ್ನ ನೀವು ನೋಡಿದ್ದೀರಾ. ಆದ್ರೆ ಈಗ ಅಲ್ಲಿನ ಆ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನಂತೆ ಗಣಿನಾಡಾಗಿದೆ.

ಗಣಿನಾಡು ಬಳ್ಳಾರಿಯಲ್ಲಿ ಮಲೆನಾಡಿನ ಸೌಂದರ್ಯ ಮನೆ ಮಾಡಿದೆ. ಬಳ್ಳಾರಿ ತಾಲೂಕಿನಿಂದ 18 ಕಿಮೀ ದೂರದಲ್ಲಿರುವ ಮಿಂಚೇರಿ ಅರಣ್ಯ ಪ್ರದೇಶ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಈ ವರ್ಷ ಹೆಚ್ಚು ಮಳೆಯಾಗಿದ್ದರಿಂದ ಮಿಂಚೇರಿ ಅರಣ್ಯ ಪ್ರದೇಶ ಈಗ ಪ್ರವಾಸಿಗರನ್ನ ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ. ಸುಮಾರು 2625 ಎಕರೆ ವಿಸ್ತೀರ್ಣದ ಈ ಅರಣ್ಯ ಪ್ರದೇಶದಲ್ಲಿ ಬೆಟ್ಟಗುಡ್ಡಗಳು, ಇಲ್ಲಿನ ಪ್ರಕೃತಿ ಸೌಂದರ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಬ್ರಿಟಿಷ್ ಕಾಲದ ಜಡ್ಜ್​ ಮನೆ ಪ್ರವಾಸಿಗರಿಗೆ ಅಚ್ಚುಮೆಚ್ಚು  ದಿನದಿಂದ ದಿನಕ್ಕೆ ಹೆಚ್ಚು ಪ್ರಸಿದ್ಧಿ ಪಡೆಯುತ್ತಿರುವ ಮಿಂಚೇರಿ ಅರಣ್ಯ ಪ್ರದೇಶದ ಸೌಂದರ್ಯ ವೀಕ್ಷಿಸಲು ನಿತ್ಯ ಸಾವಿರಾರು ಜನರು ಬರುತ್ತಿದ್ದಾರೆ. ಅದರಲ್ಲೂ ಈ ಅರಣ್ಯ ಪ್ರದೇಶದಲ್ಲಿ ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡಿದ್ದ ನ್ಯಾಯಾಧೀಶರ ವಾಸಸ್ಥಳದ ಬಂಗಲೆಯೂ ಕೂಡ ಪ್ರವಾಸಿಗರಿಗೆ ಹೊಸ ಅನುಭವ ನೀಡುತ್ತಿದೆ. ಮಲೆನಾಡಿನ ಅನುಭವ ನೀಡುತ್ತಿರುವ ಬಿಸಿಲನಾಡಿನ ಈ ಪ್ರದೇಶವನ್ನ ಅಭಿವೃದ್ಧಿ ಮಾಡಬೇಕು ಅನ್ನೋದು ಪ್ರವಾಸಿಗರ ಮಾತು.

ಪ್ರತಿ ವರ್ಷ ಸಮರ್ಪಕ ಮಳೆ ಇಲ್ಲದೇ ಇಲ್ಲಿನ ಗುಡ್ಡಬೆಟ್ಟಗಳು, ಇಲ್ಲಿನ ಪರಿಸರ ಬೆಂದು ಹೋಗುತ್ತಿತ್ತು. ಆದ್ರೆ ಈ ವರ್ಷ ನಿರಂತರ ಮಳೆಯಿಂದ ಮಿಂಚೇರಿ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಾ ಪ್ರವಾಸಿಗರನ್ನ ಕೈಬಿಸಿ ಕರೆಯುತ್ತಿದೆ.

Published On - 2:51 pm, Tue, 13 October 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!