AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ

ಬಳ್ಳಾರಿ: ಗಣಿನಾಡು ಬಳ್ಳಾರಿ ಅಂದ್ರೆ ಥಟ್ ಅಂತ ನೆನಪಾಗೋದು ಗಣಿ ಧೂಳು. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಜೆಸಿಬಿ, ಲಾರಿಗಳು ಸದ್ದು ಮಾಡೋದನ್ನ ನೀವು ನೋಡಿದ್ದೀರಾ. ಆದ್ರೆ ಈಗ ಅಲ್ಲಿನ ಆ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನಂತೆ ಗಣಿನಾಡಾಗಿದೆ. ಗಣಿನಾಡು ಬಳ್ಳಾರಿಯಲ್ಲಿ ಮಲೆನಾಡಿನ ಸೌಂದರ್ಯ ಮನೆ ಮಾಡಿದೆ. ಬಳ್ಳಾರಿ ತಾಲೂಕಿನಿಂದ 18 ಕಿಮೀ ದೂರದಲ್ಲಿರುವ ಮಿಂಚೇರಿ ಅರಣ್ಯ ಪ್ರದೇಶ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಈ ವರ್ಷ ಹೆಚ್ಚು ಮಳೆಯಾಗಿದ್ದರಿಂದ ಮಿಂಚೇರಿ ಅರಣ್ಯ ಪ್ರದೇಶ ಈಗ ಪ್ರವಾಸಿಗರನ್ನ […]

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ
ಆಯೇಷಾ ಬಾನು
| Edited By: |

Updated on:Oct 14, 2020 | 10:46 AM

Share

ಬಳ್ಳಾರಿ: ಗಣಿನಾಡು ಬಳ್ಳಾರಿ ಅಂದ್ರೆ ಥಟ್ ಅಂತ ನೆನಪಾಗೋದು ಗಣಿ ಧೂಳು. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಜೆಸಿಬಿ, ಲಾರಿಗಳು ಸದ್ದು ಮಾಡೋದನ್ನ ನೀವು ನೋಡಿದ್ದೀರಾ. ಆದ್ರೆ ಈಗ ಅಲ್ಲಿನ ಆ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನಂತೆ ಗಣಿನಾಡಾಗಿದೆ.

ಗಣಿನಾಡು ಬಳ್ಳಾರಿಯಲ್ಲಿ ಮಲೆನಾಡಿನ ಸೌಂದರ್ಯ ಮನೆ ಮಾಡಿದೆ. ಬಳ್ಳಾರಿ ತಾಲೂಕಿನಿಂದ 18 ಕಿಮೀ ದೂರದಲ್ಲಿರುವ ಮಿಂಚೇರಿ ಅರಣ್ಯ ಪ್ರದೇಶ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಈ ವರ್ಷ ಹೆಚ್ಚು ಮಳೆಯಾಗಿದ್ದರಿಂದ ಮಿಂಚೇರಿ ಅರಣ್ಯ ಪ್ರದೇಶ ಈಗ ಪ್ರವಾಸಿಗರನ್ನ ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ. ಸುಮಾರು 2625 ಎಕರೆ ವಿಸ್ತೀರ್ಣದ ಈ ಅರಣ್ಯ ಪ್ರದೇಶದಲ್ಲಿ ಬೆಟ್ಟಗುಡ್ಡಗಳು, ಇಲ್ಲಿನ ಪ್ರಕೃತಿ ಸೌಂದರ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಬ್ರಿಟಿಷ್ ಕಾಲದ ಜಡ್ಜ್​ ಮನೆ ಪ್ರವಾಸಿಗರಿಗೆ ಅಚ್ಚುಮೆಚ್ಚು  ದಿನದಿಂದ ದಿನಕ್ಕೆ ಹೆಚ್ಚು ಪ್ರಸಿದ್ಧಿ ಪಡೆಯುತ್ತಿರುವ ಮಿಂಚೇರಿ ಅರಣ್ಯ ಪ್ರದೇಶದ ಸೌಂದರ್ಯ ವೀಕ್ಷಿಸಲು ನಿತ್ಯ ಸಾವಿರಾರು ಜನರು ಬರುತ್ತಿದ್ದಾರೆ. ಅದರಲ್ಲೂ ಈ ಅರಣ್ಯ ಪ್ರದೇಶದಲ್ಲಿ ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡಿದ್ದ ನ್ಯಾಯಾಧೀಶರ ವಾಸಸ್ಥಳದ ಬಂಗಲೆಯೂ ಕೂಡ ಪ್ರವಾಸಿಗರಿಗೆ ಹೊಸ ಅನುಭವ ನೀಡುತ್ತಿದೆ. ಮಲೆನಾಡಿನ ಅನುಭವ ನೀಡುತ್ತಿರುವ ಬಿಸಿಲನಾಡಿನ ಈ ಪ್ರದೇಶವನ್ನ ಅಭಿವೃದ್ಧಿ ಮಾಡಬೇಕು ಅನ್ನೋದು ಪ್ರವಾಸಿಗರ ಮಾತು.

ಪ್ರತಿ ವರ್ಷ ಸಮರ್ಪಕ ಮಳೆ ಇಲ್ಲದೇ ಇಲ್ಲಿನ ಗುಡ್ಡಬೆಟ್ಟಗಳು, ಇಲ್ಲಿನ ಪರಿಸರ ಬೆಂದು ಹೋಗುತ್ತಿತ್ತು. ಆದ್ರೆ ಈ ವರ್ಷ ನಿರಂತರ ಮಳೆಯಿಂದ ಮಿಂಚೇರಿ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಾ ಪ್ರವಾಸಿಗರನ್ನ ಕೈಬಿಸಿ ಕರೆಯುತ್ತಿದೆ.

Published On - 2:51 pm, Tue, 13 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
15 ಜನರ ಸಾವಿಗೆ ಕಾರಣವಾದ ಯುಎಸ್ ಕಾರ್ಗೋ ಜೆಟ್ ಅಪಘಾತದ ವಿಡಿಯೋ
15 ಜನರ ಸಾವಿಗೆ ಕಾರಣವಾದ ಯುಎಸ್ ಕಾರ್ಗೋ ಜೆಟ್ ಅಪಘಾತದ ವಿಡಿಯೋ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ