AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ

ಬಳ್ಳಾರಿ: ಗಣಿನಾಡು ಬಳ್ಳಾರಿ ಅಂದ್ರೆ ಥಟ್ ಅಂತ ನೆನಪಾಗೋದು ಗಣಿ ಧೂಳು. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಜೆಸಿಬಿ, ಲಾರಿಗಳು ಸದ್ದು ಮಾಡೋದನ್ನ ನೀವು ನೋಡಿದ್ದೀರಾ. ಆದ್ರೆ ಈಗ ಅಲ್ಲಿನ ಆ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನಂತೆ ಗಣಿನಾಡಾಗಿದೆ. ಗಣಿನಾಡು ಬಳ್ಳಾರಿಯಲ್ಲಿ ಮಲೆನಾಡಿನ ಸೌಂದರ್ಯ ಮನೆ ಮಾಡಿದೆ. ಬಳ್ಳಾರಿ ತಾಲೂಕಿನಿಂದ 18 ಕಿಮೀ ದೂರದಲ್ಲಿರುವ ಮಿಂಚೇರಿ ಅರಣ್ಯ ಪ್ರದೇಶ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಈ ವರ್ಷ ಹೆಚ್ಚು ಮಳೆಯಾಗಿದ್ದರಿಂದ ಮಿಂಚೇರಿ ಅರಣ್ಯ ಪ್ರದೇಶ ಈಗ ಪ್ರವಾಸಿಗರನ್ನ […]

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 14, 2020 | 10:46 AM

Share

ಬಳ್ಳಾರಿ: ಗಣಿನಾಡು ಬಳ್ಳಾರಿ ಅಂದ್ರೆ ಥಟ್ ಅಂತ ನೆನಪಾಗೋದು ಗಣಿ ಧೂಳು. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಜೆಸಿಬಿ, ಲಾರಿಗಳು ಸದ್ದು ಮಾಡೋದನ್ನ ನೀವು ನೋಡಿದ್ದೀರಾ. ಆದ್ರೆ ಈಗ ಅಲ್ಲಿನ ಆ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನಂತೆ ಗಣಿನಾಡಾಗಿದೆ.

ಗಣಿನಾಡು ಬಳ್ಳಾರಿಯಲ್ಲಿ ಮಲೆನಾಡಿನ ಸೌಂದರ್ಯ ಮನೆ ಮಾಡಿದೆ. ಬಳ್ಳಾರಿ ತಾಲೂಕಿನಿಂದ 18 ಕಿಮೀ ದೂರದಲ್ಲಿರುವ ಮಿಂಚೇರಿ ಅರಣ್ಯ ಪ್ರದೇಶ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಈ ವರ್ಷ ಹೆಚ್ಚು ಮಳೆಯಾಗಿದ್ದರಿಂದ ಮಿಂಚೇರಿ ಅರಣ್ಯ ಪ್ರದೇಶ ಈಗ ಪ್ರವಾಸಿಗರನ್ನ ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ. ಸುಮಾರು 2625 ಎಕರೆ ವಿಸ್ತೀರ್ಣದ ಈ ಅರಣ್ಯ ಪ್ರದೇಶದಲ್ಲಿ ಬೆಟ್ಟಗುಡ್ಡಗಳು, ಇಲ್ಲಿನ ಪ್ರಕೃತಿ ಸೌಂದರ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಬ್ರಿಟಿಷ್ ಕಾಲದ ಜಡ್ಜ್​ ಮನೆ ಪ್ರವಾಸಿಗರಿಗೆ ಅಚ್ಚುಮೆಚ್ಚು  ದಿನದಿಂದ ದಿನಕ್ಕೆ ಹೆಚ್ಚು ಪ್ರಸಿದ್ಧಿ ಪಡೆಯುತ್ತಿರುವ ಮಿಂಚೇರಿ ಅರಣ್ಯ ಪ್ರದೇಶದ ಸೌಂದರ್ಯ ವೀಕ್ಷಿಸಲು ನಿತ್ಯ ಸಾವಿರಾರು ಜನರು ಬರುತ್ತಿದ್ದಾರೆ. ಅದರಲ್ಲೂ ಈ ಅರಣ್ಯ ಪ್ರದೇಶದಲ್ಲಿ ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡಿದ್ದ ನ್ಯಾಯಾಧೀಶರ ವಾಸಸ್ಥಳದ ಬಂಗಲೆಯೂ ಕೂಡ ಪ್ರವಾಸಿಗರಿಗೆ ಹೊಸ ಅನುಭವ ನೀಡುತ್ತಿದೆ. ಮಲೆನಾಡಿನ ಅನುಭವ ನೀಡುತ್ತಿರುವ ಬಿಸಿಲನಾಡಿನ ಈ ಪ್ರದೇಶವನ್ನ ಅಭಿವೃದ್ಧಿ ಮಾಡಬೇಕು ಅನ್ನೋದು ಪ್ರವಾಸಿಗರ ಮಾತು.

ಪ್ರತಿ ವರ್ಷ ಸಮರ್ಪಕ ಮಳೆ ಇಲ್ಲದೇ ಇಲ್ಲಿನ ಗುಡ್ಡಬೆಟ್ಟಗಳು, ಇಲ್ಲಿನ ಪರಿಸರ ಬೆಂದು ಹೋಗುತ್ತಿತ್ತು. ಆದ್ರೆ ಈ ವರ್ಷ ನಿರಂತರ ಮಳೆಯಿಂದ ಮಿಂಚೇರಿ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಾ ಪ್ರವಾಸಿಗರನ್ನ ಕೈಬಿಸಿ ಕರೆಯುತ್ತಿದೆ.

Published On - 2:51 pm, Tue, 13 October 20

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ