ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

Updated on: Jan 08, 2025 | 9:46 PM

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಆಕಾಶವಾಣಿಯ ವಿಶೇಷ ಸಂಯೋಜನೆಯ ಹಾಡೊಂದನ್ನು ಪ್ರಯಾಗ್​ರಾಜ್​ನ ಮಹಾಕುಂಭಕ್ಕೆ ಅರ್ಪಿಸಿದ್ದಾರೆ. ಈ ವಿಶೇಷವಾದ ಹಾಡು ಮಹಾಕುಂಭದ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಸಾರುವಂತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಬುಧವಾರದಂದು ಆಕಾಶವಾಣಿ ಮತ್ತು ದೂರದರ್ಶನದ ಮಹಾ ಕುಂಭ 2025 ರ ವಿಶೇಷ ಹಾಡನ್ನು ಬಿಡುಗಡೆ ಮಾಡಿದರು. ಈ ಹಾಡು ಕಾರ್ಯಕ್ರಮದ ಗೀತೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಇದು ಮಹಾಕುಂಭದ ಜಾಗತಿಕ ಪ್ರೇಕ್ಷಕರನ್ನು ಆಕರ್ಷಿಸುತ್ತದೆ ಮತ್ತು ಮಹತ್ವವನ್ನು ಹೆಚ್ಚಿಸುತ್ತದೆ.

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯಲಿರುವ ಮಹಾಕುಂಭ-2025ಕ್ಕೆ ವಿಶೇಷವಾಗಿ ಸಂಯೋಜನೆ ಮಾಡಲಾಗಿರುವ ಹಾಡೊಂದನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಲೋಕಾರ್ಪಣೆಗೊಳಿಸಿದರು. ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ ಸಂಯೋಜನೆ ಮಾಡಿರುವ ಹಾಡು ಇದಾಗಿದೆ. ಈ ಹಾಡು ಪ್ರಯಾಗ್‌ರಾಜ್‌ನಲ್ಲಿರುವ ಪವಿತ್ರ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾಕುಂಭದ ವೈಭವಕ್ಕೆ ನೀಡುವ ಗೌರವವಾಗಿದೆ.

ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಈ ಕಾರ್ಯಕ್ರಮವು ಅತಿದೊಡ್ಡ ಧಾರ್ಮಿಕ ಸಭೆಗಳಲ್ಲಿ ಒಂದಾಗಿದೆ. ಜಗತ್ತಿನಲ್ಲಿ ಲಕ್ಷಾಂತರ ಯಾತ್ರಿಕರು, ಸಂತರು ಮತ್ತು ಆಧ್ಯಾತ್ಮಿಕ ನಾಯಕರು ಬರುತ್ತಾರೆ. ಈ ಬಾರಿ ಮಹಾಕುಂಭಕ್ಕೆ 45 ಕೋಟಿ ಭಕ್ತರು ಬರುವ ನಿರೀಕ್ಷೆ ಇದೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ಪ್ರಯಾಗರಾಜ್‌ನಲ್ಲಿ ಮಹಾ ಕುಂಭ ನಡೆಯಲಿದೆ. ಮಹಾಕುಂಭಕ್ಕೆ ಸಂಯೋಜಿಸಿ, ಚಿತ್ರೀಕರಿಸಲಾದ ಈ ವಿಡಿಯೋ ಹಾಗೂ ಹಾಡನ್ನು ನೀವೂ ಒಮ್ಮೆ ನೋಡಿಬಿಡಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More