ಲೋಕಾಯುಕ್ತ ಸರ್ಚ್ ವಾರಂಟ್ ಜಾರಿ ಮಾಡಿದ್ದನ್ನು ಮೊದಲು ಸಚಿವ ಭೈರತಿ ಸುರೇಶ್ಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ
ಭೈರತಿ ಸುರೇಶ್ ಮುಡಾಗೆ ಭೇಟಿ ನೀಡಿದ ಕೇವಲ ಎರಡು ದಿನಗಳಲ್ಲಿ ಲೋಕಾಯುಕ್ತ ಎಸ್ಪಿ ಆಗಿದ್ದ ಸಜೀತ್ ವಿಎಸ್ ಅವರ ಟ್ರಾನ್ಸ್ಫರ್ ಆಗಿದೆ, ಪ್ರಕರಣದಲ್ಲಿ ಅವರ ಪಾತ್ರ ಇರೋದು ಗೊತ್ತಾಗುತ್ತಿದೆ, ಹಾಗಾಗಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿರುವುದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಸ್ನೇಹಮಯಿ ಕೃಷ್ಣ ಹೇಳಿದರು.
ಮೈಸೂರು: ಮುಡಾ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಹಾಗಾಗಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಮ್ಮೆ ಹೇಳಿದರು. ನಗರದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಕೃಷ್ಣ, ಜೂನ್ 28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರಂಟ್ ಜಾರಿಯಾಗಿದ್ದರೂ ಡಿವೈಎಸ್ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ, ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವರಿಗೆ ವಿಷಯವನ್ನು ತಿಳಿಸಲಾಗಿದೆ, ಭೈರತಿ ಸುರೇಶ್ ಚಾಪರ್ನಲ್ಲಿ ಬಂದು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಕೃಷ್ಣ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಪ್ರಕರಣ ನಿಭಾಯಿಸುವಲ್ಲಿ ಸಿಎಂ ಫೇಲ್, ಸಿದ್ದರಾಮಯ್ಯ ವಿರುದ್ಧ ಸಚಿವರು ಬೇಸರ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

