AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ: ಅಧಿಕಾರಿಗಳಿಗೆ ಖಡಕ್​​ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ: ಅಧಿಕಾರಿಗಳಿಗೆ ಖಡಕ್​​ ಸೂಚನೆ

ಜಗದೀಶ ಬಿ.
| Edited By: |

Updated on: Sep 17, 2026 | 12:37 PM

Share

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿ ಬಳಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಪ್ಯಾಕೇಜ್-11 ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ವೀಕ್ಷಿಸಿ ಪರಿಶೀಲಿಸಿದರು. ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಮುಂದಿನ ಒಂದೂವರೆ ತಿಂಗಳೊಳಗೆ ಯೋಜನೆಯ ಎರಡನೇ ಹಂತ (Stage-2) ಪೂರ್ಣಗೊಳ್ಳಲಿದೆ.

ತುಮಕೂರು, ಸೆಪ್ಟೆಂಬರ್​​ 17: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿ ಬಳಿ ನೆಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಸಚಿವ ಎನ್​. ಚಲುವರಾಯಸ್ವಾಮಿ ಪರಿಶೀಲನೆ ನಡೆಸಿದ್ದಾರೆ. ಪ್ಯಾಕೇಜ್-11 ಕಾಮಗಾರಿ ವೀಕ್ಷಿಸಿದ ಸಚಿವರು, ಗ್ರಾವಿಟಿ ಕೆನಾಲ್ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ಸಚಿವರಿಗೆ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಸಾಥ್ ನೀಡಿದ್ದಾರೆ. ಸ್ಟೇಜ್-2 ಅರಣ್ಯ ಅನುಮತಿ ಕಡತಗಳು ಈಗಾಗಲೇ ದೆಹಲಿಗೆ ರವಾನೆಯಾಗಿದ್ದು, ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ ಸಿಗುವ ನಿರೀಕ್ಷೆಯಿದೆ. ಅ.15ರೊಳಗೆ ತುಮಕೂರು ಭಾಗದ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us