ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ: ಅಧಿಕಾರಿಗಳಿಗೆ ಖಡಕ್ ಸೂಚನೆ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿ ಬಳಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಪ್ಯಾಕೇಜ್-11 ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ವೀಕ್ಷಿಸಿ ಪರಿಶೀಲಿಸಿದರು. ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಮುಂದಿನ ಒಂದೂವರೆ ತಿಂಗಳೊಳಗೆ ಯೋಜನೆಯ ಎರಡನೇ ಹಂತ (Stage-2) ಪೂರ್ಣಗೊಳ್ಳಲಿದೆ.
ತುಮಕೂರು, ಸೆಪ್ಟೆಂಬರ್ 17: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿ ಬಳಿ ನೆಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಸಚಿವ ಎನ್. ಚಲುವರಾಯಸ್ವಾಮಿ ಪರಿಶೀಲನೆ ನಡೆಸಿದ್ದಾರೆ. ಪ್ಯಾಕೇಜ್-11 ಕಾಮಗಾರಿ ವೀಕ್ಷಿಸಿದ ಸಚಿವರು, ಗ್ರಾವಿಟಿ ಕೆನಾಲ್ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ಸಚಿವರಿಗೆ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಸಾಥ್ ನೀಡಿದ್ದಾರೆ. ಸ್ಟೇಜ್-2 ಅರಣ್ಯ ಅನುಮತಿ ಕಡತಗಳು ಈಗಾಗಲೇ ದೆಹಲಿಗೆ ರವಾನೆಯಾಗಿದ್ದು, ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ ಸಿಗುವ ನಿರೀಕ್ಷೆಯಿದೆ. ಅ.15ರೊಳಗೆ ತುಮಕೂರು ಭಾಗದ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
