Kannada News Videos minister cheluvarayaswamy in varanasi ganga aarti kannada news
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ, ರಾಜ್ಯದಲ್ಲೂ ಕಾವೇರಿ ಆರತಿಗೆ ಚಿಂತನೆ
ಶುಕ್ರವಾರ ರಾತ್ರಿ ಕಾಂಗ್ರೆಸ್ ನಿಯೋಗ ವಾರಣಾಸಿಯಲ್ಲಿ ಗಂಗಾ ಆರತಿ ಕಾರ್ಯಕ್ರಮ ವೀಕ್ಷಣೆ ಮಾಡಿದೆ. ಈ ವೇಳೆ ಚಲುವರಾಯಸ್ವಾಮಿ ಹಾಗೂ ನರೇಂದ್ರ ಸ್ವಾಮಿ ಅವರು ಭಕ್ತಿಯಿಂದ ಗಂಗಾ ಮಾತೆಗೆ ಕೈ ಮುಗಿದಿದ್ದಾರೆ. ಗಂಗಾರತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿ ಕಾವೇರಿ ಆರತಿಗೆ ಆಲೋಚನೆ ನಡೆಸಲಾಗಿದ್ದು, ಈ ಬಗ್ಗೆ ಅಧ್ಯಯನ ನಡೆಸಲು ಕಾಂಗ್ರೆಸ್ ಸಮಿತಿಯ ಸದಸ್ಯರು ವಾರಣಾಸಿಗೆ ತೆರಳಿದ್ದಾರೆ.
ಬೆಂಗಳೂರು, ಸೆ.22: ವಾರಣಾಸಿಯ ಗಂಗಾ ಆರತಿ (Ganga Aarti) ಮಾದರಿಯಲ್ಲಿ ರಾಜ್ಯದಲ್ಲಿ ಕಾವೇರಿ ಆರತಿ (Cauvery Aarti) ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಅಧ್ಯಯನ ನಡೆಸಲು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರಕ್ಕೆ ತೆರಳಿದೆ. ಮೊನ್ನೆ ಶುಕ್ರವಾರ ರಾತ್ರಿ ಕಾಂಗ್ರೆಸ್ ನಿಯೋಗ ಗಂಗಾ ಆರತಿ ಕಾರ್ಯಕ್ರಮ ವೀಕ್ಷಣೆ ಮಾಡಿದೆ. ಈ ವೇಳೆ ಚಲುವರಾಯಸ್ವಾಮಿ ಹಾಗೂ ನರೇಂದ್ರ ಸ್ವಾಮಿ ಅವರು ಭಕ್ತಿಯಿಂದ ಗಂಗಾ ಮಾತೆಗೆ ಕೈ ಮುಗಿದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ