AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ

ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ

ಸುರೇಶ ನಾಯಕ
| Updated By: Ganapathi Sharma

Updated on: Apr 15, 2025 | 12:54 PM

ಬೀದರ್​​ನಲ್ಲಿ ಸೋಮವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವ ಈಶ್ವರ್ ಖಂಡ್ರೆ ಹಾಗೂ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ ನಡೆಸಿದ್ದಾರೆ. ಖಂಡ್ರೆ ಚುನಾವಣಾ ಭಾಷಣ ಮಾಡಿದ್ದಾರೆ ಎಂದು ಬೆಲ್ದಾಳೆ ಆರೋಪಿಸಿದರೆ, ನಂತರ ಮಾತನಾಡಿದ ಖಂಡ್ರೆ, ಇನ್ನೂ ಕೆಲವು ವಿಷಯ ಹೇಳಿದರೆ ಇವರು ವೇದಿಕೆಯಿಂದಲೇ ನಿರ್ಗಮಿಸಬೇಕಾಗುತ್ತದೆ ಎಂದರು.

ಬೀದರ್, ಏಪ್ರಿಲ್ 15: ಬೀದರ್​ನಲ್ಲಿ ಸೋಮವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ ವೇದಿಕೆಯಲ್ಲೇ ವಾಕ್ಸಮರ ನಡೆಸಿದ್ದಾರೆ. ಖಂಡ್ರೆ ಭಾಷದ ಬಳಿಕ ಮಾತನಾಡಿದ ಶಾಸಕ ಬೆಲ್ದಾಳೆ, ಸಚಿವರು ಚುನಾವಣಾ ಭಾಷಣ ಮಾಡಿದ್ದಾರೆ ಎಂದರು. ಚುನಾವಣೆಗೆ ಇನ್ನೂ 3 ವರ್ಷವಿದೆ ಎಂದು ಖಂಡ್ರೆ ಕಾಲೆಳೆದರು. ಬೆಲ್ದಾಳೆ ಭಾಷಣ ಮುಗಿಯುತ್ತಿದ್ದಂತೆ ಡಯಾಸ್​ಗೆ ಬಂದ ಖಂಡ್ರೆ, ಈ ಪವಿತ್ರ ಕಾರ್ಯಕ್ರಮದಲ್ಲಿ ನಾನು ಸತ್ಯವನ್ನು ಹೇಳಿದ್ದೇನೆ. ಸತ್ಯ ಹೇಳಿದ್ರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದೀರಿ? ಇನ್ನೂ ಕೆಲವು ವಿಷಯ ಹೇಳಿದ್ರೆ ವೇದಿಕೆಯಿಂದ ನಿರ್ಗಮಿಸಬೇಕಾಗುತ್ತದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ