ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ

Edited By:

Updated on: Apr 15, 2025 | 12:54 PM

ಬೀದರ್​​ನಲ್ಲಿ ಸೋಮವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವ ಈಶ್ವರ್ ಖಂಡ್ರೆ ಹಾಗೂ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ ನಡೆಸಿದ್ದಾರೆ. ಖಂಡ್ರೆ ಚುನಾವಣಾ ಭಾಷಣ ಮಾಡಿದ್ದಾರೆ ಎಂದು ಬೆಲ್ದಾಳೆ ಆರೋಪಿಸಿದರೆ, ನಂತರ ಮಾತನಾಡಿದ ಖಂಡ್ರೆ, ಇನ್ನೂ ಕೆಲವು ವಿಷಯ ಹೇಳಿದರೆ ಇವರು ವೇದಿಕೆಯಿಂದಲೇ ನಿರ್ಗಮಿಸಬೇಕಾಗುತ್ತದೆ ಎಂದರು.

ಬೀದರ್, ಏಪ್ರಿಲ್ 15: ಬೀದರ್​ನಲ್ಲಿ ಸೋಮವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ ವೇದಿಕೆಯಲ್ಲೇ ವಾಕ್ಸಮರ ನಡೆಸಿದ್ದಾರೆ. ಖಂಡ್ರೆ ಭಾಷದ ಬಳಿಕ ಮಾತನಾಡಿದ ಶಾಸಕ ಬೆಲ್ದಾಳೆ, ಸಚಿವರು ಚುನಾವಣಾ ಭಾಷಣ ಮಾಡಿದ್ದಾರೆ ಎಂದರು. ಚುನಾವಣೆಗೆ ಇನ್ನೂ 3 ವರ್ಷವಿದೆ ಎಂದು ಖಂಡ್ರೆ ಕಾಲೆಳೆದರು. ಬೆಲ್ದಾಳೆ ಭಾಷಣ ಮುಗಿಯುತ್ತಿದ್ದಂತೆ ಡಯಾಸ್​ಗೆ ಬಂದ ಖಂಡ್ರೆ, ಈ ಪವಿತ್ರ ಕಾರ್ಯಕ್ರಮದಲ್ಲಿ ನಾನು ಸತ್ಯವನ್ನು ಹೇಳಿದ್ದೇನೆ. ಸತ್ಯ ಹೇಳಿದ್ರೆ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದೀರಿ? ಇನ್ನೂ ಕೆಲವು ವಿಷಯ ಹೇಳಿದ್ರೆ ವೇದಿಕೆಯಿಂದ ನಿರ್ಗಮಿಸಬೇಕಾಗುತ್ತದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More