ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್

Updated on: Apr 29, 2026 | 10:35 AM

ದೆಹಲಿಯಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರು ರಾಷ್ಟ್ರೀಯ ಎಸ್ಸಿ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಒಳ ಮೀಸಲಾತಿ ಬಗ್ಗೆ ಚರ್ಚಿಸಿದರು. ಇದಾದ ಬೆನ್ನಲ್ಲೇ ಸಂಸದ ಸುನಿಲ್ ಬೋಸ್ ಮನೆಯಲ್ಲಿ ನಡೆದ ಡಿನ್ನರ್ ಸಭೆಯಲ್ಲಿ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದು, ರಾಜ್ಯ ರಾಜಕೀಯ ಬದಲಾವಣೆಯ ಬಗ್ಗೆ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು/ದೆಹಲಿ, ಏಪ್ರಿಲ್ 29: ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್

ಆಯೋಗದ ಅಧ್ಯಕ್ಷರ ಭೇಟಿಯ ನಂತರ ಸಚಿವ ಮಹದೇವಪ್ಪ ಅವರು ಸಂಸದ ಸುನಿಲ್ ಬೋಸ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಡಿನ್ನರ್ ಮೀಟಿಂಗ್​​ನಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್ ಹಾಗೂ ಮುಖಂಡ ಹಂಪನಗೌಡ ಬಾದರ್ಲಿ ಉಪಸ್ಥಿತರಿದ್ದರು. ರಾಜ್ಯದಲ್ಲಿ ಕೇಳಿಬರುತ್ತಿರುವ ಸಿಎಂ ಬದಲಾವಣೆ ಚರ್ಚೆ, ಸಚಿವ ಸಂಪುಟ ಪುನಾರಚನೆ ಮತ್ತು ಅಹಿಂದ ವರ್ಗದ ನಾಯಕರ ಸ್ಥಾನಮಾನಗಳ ಕುರಿತು ಇಲ್ಲಿ ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗಿದೆ. ಮುಂಬರುವ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಕುರಿತೂ ಈ ನಾಯಕರು ಸಮಾಲೋಚನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 29, 2026 10:34 AM
Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More