ಸಚಿವ ಹೆಚ್​ಕೆ ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿ ಬರಲಿ: ಇಮ್ಮಡಿ ಸಿದ್ದರಾಮೇಶ್ವರಶ್ರೀ

Edited By:

Updated on: Feb 02, 2025 | 4:44 PM

ಗದಗದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿಯಲ್ಲಿ, ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಹೇಳಿದ್ದಾರೆ. ಎಸ್.ಎಂ. ಕೃಷ್ಣರ ನಂತರ ಸಿಎಂ ಸ್ಥಾನಕ್ಕೆ ಪಾಟೀಲ್ ಅವರ ಹೆಸರು ಚರ್ಚೆಯಾಗಿತ್ತು ಎಂದು ಸ್ವಾಮೀಜಿ ನೆನಪಿಸಿಕೊಂಡರು. ತಡವಾಗಿಯಾದರೂ ಅವರಿಗೆ ಈ ಯೋಗ ಕೂಡಿಬರಲಿ ಎಂದು ಆಶಿಸಿದರು.

ಗದಗ, ಫೆಬ್ರವರಿ 02: ಸಚಿವ ಹೆಚ್​​.ಕೆ.ಪಾಟೀಲರಿಗೆ (H. K. Patil) ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರಶ್ರೀ ಹೇಳಿದ್ದಾರೆ. ನಗರದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಇತ್ತು. ಸಚಿವ ಹೆಚ್​​.ಕೆ.ಪಾಟೀಲರು 2-3 ಬಾರಿ ಸಿಎಂ ಆಗಿರುತ್ತಿದ್ದರು. ಎಸ್​ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಅವರ ಹೆಸರು ಕೇಳಿಬಂದಿತ್ತು. ತಡವಾಗಿಯಾದರೂ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿಬರಲಿ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More