ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಗುಣಗಾನ ಮಾಡಿದ ಸಚಿವ ಕೆಸಿ ನಾರಾಯಣಗೌಡ ವರಿಷ್ಠರ ಕೆಂಗಣ್ಣಿಗೆ ಗುರಿಯಾಗೋದು ನಿಶ್ಚಿತ
ಕೆಆರ್ ಪೇಟೆ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವರು ಸಿದ್ದರಾಮಯ್ಯನವರ ಗುಣಗಾನ ಮಾಡಿದರು.
ಮಂಡ್ಯ: ಬಿಜೆಪಿ ಹೈಕಮಾಂಡ್ ರಾಜ್ಯ ಸಚಿವ ಸಂಪುಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿರುವ ಕೆ ಸಿ ನಾರಾಯಣಗೌಡರಿಗೆ (KC Narayanagowda) ಶೋಕಾಸ್ ನೊಟೀಸು (show cause) ನೀಡೋದು ಪಕ್ಕಾ ಅನಿಸುತ್ತಿದೆ ಮಾರಾಯ್ರೇ. ಯಾಕೆ ಅಂತ ಈ ವಿಡಿಯೋ ವೀಕ್ಷಿಸಿದರೆ ನಿಮಗೆ ಗೊತ್ತಾಗುತ್ತದೆ. ಆಡಳಿತ ಪಕ್ಷದ ಹಲವಾರು ಸಚಿವರು ಮತ್ತು ಶಾಸಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಬಹಳ ಗೌರವ ಹೊದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಚುನಾವಣೆ ನೆತ್ತಿ ಮೇಲಿರುವಾಗ ಅವರನ್ನು ಹಾಡಿ ಹೊಗಳುವ ಮೂಲಕ ನಾರಾಯಣಗೌಡರು ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿರುವುದಂತೂ ಸತ್ಯ. ಜಿಲ್ಲೆಯ ಕೆಆರ್ ಪೇಟೆ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವರು ಸಿದ್ದರಾಮಯ್ಯನವರ ಗುಣಗಾನ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
