Five Guarantees: ಸರ್ಕಾರದ ಗ್ಯಾರಂಟಿಗಳು ಜೂನ್ ಒಂದರಂದು ಜಾರಿಯಾಗುವ ಗ್ಯಾರಂಟಿ ಇಲ್ಲ, ಸಚಿವ ಜಾರ್ಜ್ ಮಾತುಗಳಲ್ಲಿ ಸ್ಪಷ್ಟತೆ ಕಾಣದು!

ಅರುಣ್​ ಕುಮಾರ್​ ಬೆಳ್ಳಿ

Updated on: May 31, 2023 | 1:48 PM

ಮುಖ್ಯಮಂತ್ರಿಗಳು ಎಲ್ಲ ಮಾಹಿತಿಯ ಪರಾಮರ್ಶೆ ನಡೆಸಿ ನಿರ್ಧಾರ ಪ್ರಕಟಿಸುವ ಮೊದಲು ಸಂಪುಟದ ಎಲ್ಲ ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ ಎಂದು ಜಾರ್ಜ್ ಹೇಳಿದರು.

ಬೆಂಗಳೂರು: ರಾಜ್ಯದ ಜನ ಅಂದುಕೊಂಡಂತೆ ಕಾಂಗ್ರೆಸ್ ಸರ್ಕಾರ (Congress government) ನೀಡಿದ 5 ಗ್ಯಾರಂಟಿಗಳು ನಾಳೆಯಿಂದ ಅಂದರೆ ಜೂನ್ ಒಂದರಿಂದ ಜಾರಿಗೆ ಬರುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಬೆಂಗಳೂರಲ್ಲಿ ಮಾತಾಡಿದ ಇಂಧನ ಸಚಿವ (energy minister) ಕೆಜೆ ಜಾರ್ಜ್ (KJ George), ಗ್ಯಾರಂಟಿಗಳ ಜಾರಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ, ಅಂಕಿ-ಅಂಶ ಸಂಗ್ರಹಿಸುವ ಕೆಲಸ ಪೂರ್ಣಗೊಂಡಿದೆ, ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಎಲ್ಲ ಮಾಹಿತಿಯ ಪರಾಮರ್ಶೆ ನಡೆಸಿ ನಿರ್ಧಾರ ಪ್ರಕಟಿಸುವ ಮೊದಲು ಸಂಪುಟದ ಎಲ್ಲ ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.