ರಾಹುಲ್ ಗಾಂಧಿ ಯಾರೆಂದು ಸದ್ಗುರು ಹೇಳುತ್ತಾರೆ, ಅವರ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಎಷ್ಟು ಸರಿ? ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Mar 01, 2025 | 1:45 PM

ಸಹಕಾರ ಸಚಿವ ರಾಜಣ್ಣರನ್ನು ಮೊನ್ನೆಯಷ್ಟೇ ಹೈಕಮಾಂಡ್ ದೆಹಲಿಗೆ ಕರೆಸಿ ಪಕ್ಷ, ಕೆಪಿಸಿಸಿ ಮತ್ತು ಸಿಎಂ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತಾಡದಂತೆ ತಾಕೀತು ಮಾಡಿದೆ. ಎರಡು ದಿನಗಳ ಕಾಲ ಸುಮ್ಮನಿದ್ದ ರಾಜಣ್ಣ ತಮ್ಮ ಹಳೆ ಚಾಳಿಗೆ ವಾಪಸ್ಸಾಗಿದ್ದಾರೆ. ಶಿವಕುಮಾರ್ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಇದುವರೆಗೆ ಮಾತಾಡಿಲ್ಲ ಆದರೆ ರಾಜಣ್ಣ ಮಾತಾಡುತ್ತಾರೆ!

ಹಾಸನ, ಮಾರ್ಚ್ 1: ಜಿಲ್ಲೆಯ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ (KN Rajanna) ಮತ್ತೊಮ್ಮೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಮಾತಾಡಿದ್ದಾರೆ. ಸದ್ಗುರು ಜಗ್ಗಿ ವಾಸುದೇವ್ ಅವರು ರಾಹುಲ್ ಗಾಂಧಿ ಯಾರು ಅಂತ ಗೊತ್ತಿಲ್ಲ ಅಂದಿದ್ದಾರೆ, ರಾಹುಲ್ ಬಗ್ಗೆ ಸಂಸತ್ತಿನಲ್ಲಿ ಏನೇನೆಲ್ಲ ಮಾತಾಡುತ್ತಾರೆ ಅಂತ ತನಗಿಂತ ಹೆಚ್ಚು ಸಂಸದರಾಗಿರುವ ಶ್ರೇಯಸ್ ಪಟೇಲ್ ಅವರಿಗೆ ಗೊತ್ತು ಎನ್ನುತ್ತ ತಮ್ಮ ಜೊತೆಗಿದ್ದ ಹಾಸನ ಸಂಸದನನ್ನು ತೋರಿಸುತ್ತಾ ರಾಜಣ್ಣ ಹೇಳುತ್ತಾರೆ. ರಾಹುಲ್ ಗಾಂಧಿ ಅವರ ಬಗ್ಗೆ ಕೇವಲವಾಗಿ ಮಾತಾಡುವವರ ಜೊತೆ ವೇದಿಕೆ ಹಂಚಿಕೊಳ್ಳುವುದರ ಔಚಿತ್ಯವೇನು ಎಂದು ರಾಜಣ್ಣ ಪ್ರಶ್ನಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹಾಸನ ಉಸ್ತವಾರಿಯಿಂದ ಬಿಡುಗಡೆ ಕೋರಿ ಪತ್ರ ನೀಡಿದ್ದೇನೆ: ಕೆಎನ್​ ರಾಜಣ್ಣ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.