Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar: ಪ್ರವಾಹದಲ್ಲಿ ಕೊಚ್ಚಿಹೋದ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೃಷ್ಣ ಭೈರೇಗೌಡ

Karwar: ಪ್ರವಾಹದಲ್ಲಿ ಕೊಚ್ಚಿಹೋದ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೃಷ್ಣ ಭೈರೇಗೌಡ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 08, 2023 | 7:09 PM

ಹಣ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತದೆ ಎಂದು ಹೇಳಿದ ಸಚಿವರು ಮುಂಬರುವ ದಿನಗಳಲ್ಲಿ ಯಾವುದಾದರೂ ಸಹಾಯ ಬೇಕಿದ್ದರೆ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದರು.

ಕಾರವಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಹ (Krishna Byre Gowda) ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಮತ್ತೊಬ್ಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಹಾಗೆ ಮಳೆಯಿಂದ ಹಾನಿಯುಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲ ಕುಮಟಾ ತಾಲ್ಲೂಕಿನ ಬೆಟ್ಕುಳ್ಳಿ ಗ್ರಾಮದಲ್ಲಿ ಇಬ್ಬರು ಮಳೆನೀರಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸತೀಶ್ ಪಾಂಡುರಂಗ (Satish Pandurang) (40) ಮತ್ತು ಉಲ್ಲಾಸ್ ಗಾವಡಿ (Ullhas Gavadi) (50) ಎಂದು ಗುರುತಿಸಲಾಗಿದೆ. ಗ್ರಾಮಕ್ಕೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವ ಮೃತರ ಮನೆಗಳಿಗೆ ಹೋಗಿ ದುಃಖತಪ್ತ್ತ ಕುಟುಂಬಗಳನ್ನು ಸಂತೈಸಿ, ತಲಾ 5 ಲಕ್ಷ ರೂ. ಗಳ ಪರಿಹಾರವನ್ನು ನೀಡಿದರು. ಹಣ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತದೆ ಎಂದು ಹೇಳಿದ ಸಚಿವರು ಮುಂಬರುವ ದಿನಗಳಲ್ಲಿ ಯಾವುದಾದರೂ ಸಹಾಯ ಬೇಕಿದ್ದರೆ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ