ಸಚಿವ ಕೃಷ್ಣ ಭೈರೇಗೌಡ ಬೆಂಗಳೂರು ದಕ್ಷಿಣ ತಾಲೂಕು ಕಚೇರಿಯ ಸಿಬ್ಬಂದಿಯೊಬ್ಬನಿಗೆ, ‘ಪಾಳೆಗಾರನಿಗೆ ಸಲಾಂ’ ಅಂದರು!

Updated on: Jun 19, 2025 | 4:00 PM

ಒಬ್ಬ ಮಹಿಳಾ ಅಧಿಕಾರಿಗೆ ಸಚಿವ, ನಿಮ್ಮಿಂದ ಜನ ಕೆಲಸ ಮಾಡಿಸಿಕೊಳ್ಳಬೇಕೆಂದರೆ ಯಾವ್ಯಾವುದಕ್ಕೆ ಎಷ್ಟೆಷ್ಟು ರೇಟು ಅಂತ ಒಂದು ದರಪಟ್ಟಿಯನ್ನು ಕಚೇರಿಯಲ್ಲಿ ಲಗತ್ತಿಸಿಬಿಡಿ, ಆ ದೃಷ್ಟಿಯಿಂದಾದರೂ ಪಾರದರ್ಶಕತೆ ಕಾಯ್ದುಕೊಂಡಂತೆ ಅಗುತ್ತದೆ ಎಂದು ಗೇಲಿ ಮಾಡುತ್ತಾರೆ. ಮಹಿಳಾ ಸಿಬ್ಬಂದಿ ತನ್ನಿಂದಾಗಿರುವ ವಿಳಂಬ ಮತ್ತು ತಪ್ಪನ್ನು ಬೇರೆಯವರ ತಲೆಗೆ ಕಟ್ಟುವ ಪ್ರಯತ್ನ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು.

ಬೆಂಗಳೂರು, ಜೂನ್ 19: ಕೃಷ್ಣ ಭೈರೇಗೌಡ ನೇರ ನುಡಿಯ ದಕ್ಷ ಕಂದಾಯ ಸಚಿವ (revenue minister) ಎಂದು ಹೆಸರಾಗಿದ್ದಾರೆ. ಅದರೆ ರಾಜ್ಯದಲ್ಲಿ ಕಂದಾಯ ಇಲಾಖೆಯ ಕಚೇರಿಗಳು ಅದೆಷ್ಟು ಕುಲಗೆಟ್ಟು ಹೋಗಿವೆ ಎಂದರೆ ಅವುಗಳನ್ನು ಸರಿಮಾಡುವುದು ಕಷ್ಟದ ಕೆಲಸ. ಬೆಂಗಳೂರು ದಕ್ಷಿಣ ತಾಲೂಕು ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿದ ಸಚಿವ ಕಡತಗಳನ್ನು ದುಡ್ಡಿನಾಸೆಗಾಗಿ ಅವುಗಳನ್ನು ಮುಂದೆ ಸಾಗಿಸದೆ ತಮ್ಮ ಮುಂದೆ ಇಟ್ಟುಕೊಂಡಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಒಬ್ಬ ಸಿಬ್ಬಂದಿಗೆ ಸಚಿವರು, ನೀವು ದೊಡ್ಡ ಸಾಹೇಬರು, ನಿಮಗೆ ಸಲಾಂ ಹೊಡೆದು ಪಾಪದಪೂಜೆ ಏನಾದರೂ ಮಾಡಬೇಕಾ? ಎಂದು ಕೇಳುತ್ತಾರೆ.

ಇದನ್ನೂ ಓದಿ:    ಬೆಂಗಳೂರು ಡಿಸಿ ಕಚೇರಿಗೆ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ: ಅಧಿಕಾರಿಗಳು, ಸಿಬ್ಬಂದಿಗೆ ಕ್ಲಾಸ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Jun 19, 2025 03:22 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More