ಮಂಗಳೂರು: ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ನಿಗದಿತ ಮೊತ್ತಕ್ಕಿಂತ ಹೆಚ್ಚು ಖರ್ಚು ಮಾಡಿರುವ ಅಧಿಕಾರಿಗಳನ್ನು ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡರು!

ಮನ ಬಂದಂತೆ ಹಣ ಖರ್ಚು ಮಾಡಲು ಅದು ಯಾರ ಮನೆ ದುಡ್ಡು? ನಿಮ್ಮ ಮನೇದಾ ಇಲ್ಲ ನನ್ನ ಮನೇದಾ ಅಂತ ಅವರು ಮಂಗಳೂರು ನಗರ ಪಾಲಿಕೆಯ ಇಂಜಿನಿಯರಿಂಗ್ ಸಲಹೆಗಾರ ಧರ್ಮರಾಜ್​ಗೆ ಕೋಪದಲ್ಲಿ ಕೇಳಿತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದನ್ನೇ ನಾವು ಹೇಳುತ್ತಿರೋದು. ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ, ಕಾಮಗಾರಿಗಳ ಮೇಲೆ ಅಗತ್ಯಕ್ಕಿಂತ ಹೆಚ್ಚಿನ ವೆಚ್ಚ ಮಾಡುವುದನ್ನು ನಿಲ್ಲಿಸಬೇಕಿದೆ.

ಮಂಗಳೂರು: ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ನಿಗದಿತ ಮೊತ್ತಕ್ಕಿಂತ ಹೆಚ್ಚು ಖರ್ಚು ಮಾಡಿರುವ ಅಧಿಕಾರಿಗಳನ್ನು ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡರು!
|

Updated on: Aug 29, 2023 | 2:55 PM

ಮಂಗಳೂರು: ಸಿದ್ದರಾಮಯ್ಯ ಸರ್ಕಾರದ ಎಲ್ಲ ಮಂತ್ರಿಗಳು ಮತ್ತು ಶಾಸಕರು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರ ಮೈಂಡ್​ಸೆಟ್​ನೊಂದಿಗೆ ಕೆಲಸ ಮಾಡುವ ಅವಶ್ಯಕತೆಯಿದೆ ಮಾರಾಯ್ರೇ. ನಗರದ ಪಡೀಲ್ ನಲ್ಲಿ ಕಳೆದ 5 ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಇಂದು ಭೇಟಿ ನೀಡಿದ ಸಚಿವರು; ಕಾಮಗಾರಿ ಆಮೆಗತಿಯಲ್ಲಿ (snail’s pace) ಸಾಗುತ್ತಿರುವುದಕ್ಕೆ ಮತ್ತು ನಿರ್ಮಾಣ ಕಾರ್ಯಕ್ಕೆ ನಿಗದಿತ ಮೊತ್ತಕ್ಕಿಂತ (stipulated budget) ಹೆಚ್ಚು ವೆಚ್ಚ ಮಾಡಿರುವುದಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮೇಲೆ ಕಿಡಿಕಾರಿದರು. ಮನ ಬಂದಂತೆ ಹಣ ಖರ್ಚು ಮಾಡಲು ಅದು ಯಾರ ಮನೆ ದುಡ್ಡು? ನಿಮ್ಮ ಮನೇದಾ ಇಲ್ಲ ನನ್ನ ಮನೇದಾ ಅಂತ ಅವರು ಮಂಗಳೂರು ನಗರ ಪಾಲಿಕೆಯ ಇಂಜಿನಿಯರಿಂಗ್ ಸಲಹೆಗಾರ ಧರ್ಮರಾಜ್ ಗೆ (Dharmaraj) ಕೋಪದಲ್ಲಿ ಕೇಳಿತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದನ್ನೇ ನಾವು ಹೇಳುತ್ತಿರೋದು. ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ, ಕಾಮಗಾರಿಗಳ ಮೇಲೆ ಅಗತ್ಯಕ್ಕಿಂತ ಹೆಚ್ಚಿನ ವೆಚ್ಚ ಮಾಡುವುದನ್ನು ನಿಲ್ಲಿಸಬೇಕಿದೆ. ಈ ವರ್ಷ ಕೊರತೆ ಮಳೆಯಿಂದ ಬರಗಾಲ ಕೂಡ ಘೋಷಣೆಯಾಗಲಿರುವುದರಿಂದ ವೆಚ್ಚಗಳ ಮೇಲೆ ಹಿಡಿತ ಸಾಧಿಸುವ ಜರೂರತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು