ಗೃಹ ಲಕ್ಷ್ಮಿ ಯೋಜನೆಯ ನೂರಾರು ಕೋಟಿ ರೂ. ಹಣವನ್ನು ಲಕ್ಷ್ಮಿ ಹೆಬ್ಬಾಳ್ಕರ್ ನುಂಗಿದ್ದಾರೆ: ಎಸ್ ಮುನಿಸ್ವಾಮಿ, ಸಂಸದ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಯ ಶಾಸಕರು ಮತ್ತು ಸಂಸದರು ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿದ್ದಾರೆ. ಮುನಿಸ್ವಾಮಿ ಮಾತುಗಳನ್ನು ಕೇಳಿ, ಅವರು ಮಾಡುತ್ತಿರುವ ಆರೋಪಗಳಲ್ಲಿ ಹತಾಶೆ ಬಿಟ್ಟರೆ ಬೇರೇನೂ ಕಾಣದು. ಲಕ್ಷ್ಮಿ ಹೆಬ್ಬಾಳ್ಕರ್ ನೂರಾರು ಕೋಟಿ ನುಂಗಿದ್ದಾರೆ ಅಂತ ಯಾವುದಾದರೂ ಆಧಾರವಿಟ್ಟುಕೊಂಡು ಹೇಳುತ್ತಿದ್ದಾರೆಯೇ ಅಥವಾ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆಯೇ? ಸಚಿವೆ ಮಾನನಷ್ಟ ಮೊಕದ್ದಮೆ ಹೂಡಿದರೆ ಸಂಸದರು ನ್ಯಾಯಾಲಯಕ್ಕೆ ಪುರಾವೆ ಒದಗಿಸುತ್ತಾರೆಯೇ?
ಕೋಲಾರ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೋಲಾರದ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ (S Muniswamy), ಕಾಂಗ್ರೆಸ್ ಸರ್ಕಾರ ಮತ್ತು ಕೆಲ ಸಚಿವರ ವಿರುದ್ಧ ಆರೋಪಗಳ ಸರಮಾಲೆಯನ್ನು ಹರಿಸಿದರು. ಮುಂದಿನ 3 ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ (Congress government) ಉರುಳಲಿದೆ, ಶಾಸಕರಲ್ಲಿ ಕಿತ್ತಾಟ ಶುರುವಾಗಿದೆ ಎಂದು ಹೇಳಿದ ಅವರು, ಶಾಸಕರಲ್ಲಿ ಹಲವಾರು ಬಣಗಳು ಹುಟ್ಟಿಕೊಂಡಿದ್ದು, ಎಲ್ಲರೂ ಹೈಕಮಾಂಡ್ ಗೆ ದೂರು ನೀಡುವ ಮಾತಾಡುತ್ತಾರೆ ಇಲ್ಲವೇ ರಾಜೀನಾಮೆ ಸಲ್ಲಿಸುವ ಬೆದರಿಕೆ ಒಡ್ಡುತ್ತಾರೆ ಎಂದು ಹೇಳಿದರು. ಭ್ರಷ್ಟಾಚಾರ ತಾಂಡವಾಡುತ್ತಿದೆ, ಸರ್ಕಾರದ ಮಂತ್ರಿಗಳು 60 ಪರ್ಸೆಂಟ್ ಕಮೀಶನ್ ಹೊಡೆಯುತ್ತಿದ್ದಾರೆ ಎಂದು ಹೇಳಿದ ಅವರಿಗೆ ಆವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಕೂಡ ಮರೆತು ಹೋಗಿತ್ತು. ಕೊನೆಗೆ ಹೆಬ್ಬಾಳ್ಕರ್ ಅಂತಷ್ಟೇ ಹೇಳಿ ಅವರು ಗೃಹಲಕ್ಷ್ಮಿ ಯೋಜನೆಯ ನೂರಾರು ಕೋಟಿ ರೂ. ಕಬಳಿಸಿದ್ದಾರೆ ಅಂತ ಗುರುತರವಾದ ಆರೋಪ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

