ಗೃಹ ಲಕ್ಷ್ಮಿ ಯೋಜನೆಯ ನೂರಾರು ಕೋಟಿ ರೂ. ಹಣವನ್ನು ಲಕ್ಷ್ಮಿ ಹೆಬ್ಬಾಳ್ಕರ್ ನುಂಗಿದ್ದಾರೆ: ಎಸ್ ಮುನಿಸ್ವಾಮಿ, ಸಂಸದ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಯ ಶಾಸಕರು ಮತ್ತು ಸಂಸದರು ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿದ್ದಾರೆ. ಮುನಿಸ್ವಾಮಿ ಮಾತುಗಳನ್ನು ಕೇಳಿ, ಅವರು ಮಾಡುತ್ತಿರುವ ಆರೋಪಗಳಲ್ಲಿ ಹತಾಶೆ ಬಿಟ್ಟರೆ ಬೇರೇನೂ ಕಾಣದು. ಲಕ್ಷ್ಮಿ ಹೆಬ್ಬಾಳ್ಕರ್ ನೂರಾರು ಕೋಟಿ ನುಂಗಿದ್ದಾರೆ ಅಂತ ಯಾವುದಾದರೂ ಆಧಾರವಿಟ್ಟುಕೊಂಡು ಹೇಳುತ್ತಿದ್ದಾರೆಯೇ ಅಥವಾ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆಯೇ? ಸಚಿವೆ ಮಾನನಷ್ಟ ಮೊಕದ್ದಮೆ ಹೂಡಿದರೆ ಸಂಸದರು ನ್ಯಾಯಾಲಯಕ್ಕೆ ಪುರಾವೆ ಒದಗಿಸುತ್ತಾರೆಯೇ?

ಗೃಹ ಲಕ್ಷ್ಮಿ ಯೋಜನೆಯ ನೂರಾರು ಕೋಟಿ ರೂ. ಹಣವನ್ನು ಲಕ್ಷ್ಮಿ ಹೆಬ್ಬಾಳ್ಕರ್ ನುಂಗಿದ್ದಾರೆ: ಎಸ್ ಮುನಿಸ್ವಾಮಿ, ಸಂಸದ
|

Updated on: Nov 30, 2023 | 4:47 PM

ಕೋಲಾರ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೋಲಾರದ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ (S Muniswamy), ಕಾಂಗ್ರೆಸ್ ಸರ್ಕಾರ ಮತ್ತು ಕೆಲ ಸಚಿವರ ವಿರುದ್ಧ ಆರೋಪಗಳ ಸರಮಾಲೆಯನ್ನು ಹರಿಸಿದರು. ಮುಂದಿನ 3 ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ (Congress government) ಉರುಳಲಿದೆ, ಶಾಸಕರಲ್ಲಿ ಕಿತ್ತಾಟ ಶುರುವಾಗಿದೆ ಎಂದು ಹೇಳಿದ ಅವರು, ಶಾಸಕರಲ್ಲಿ ಹಲವಾರು ಬಣಗಳು ಹುಟ್ಟಿಕೊಂಡಿದ್ದು, ಎಲ್ಲರೂ ಹೈಕಮಾಂಡ್ ಗೆ ದೂರು ನೀಡುವ ಮಾತಾಡುತ್ತಾರೆ ಇಲ್ಲವೇ ರಾಜೀನಾಮೆ ಸಲ್ಲಿಸುವ ಬೆದರಿಕೆ ಒಡ್ಡುತ್ತಾರೆ ಎಂದು ಹೇಳಿದರು. ಭ್ರಷ್ಟಾಚಾರ ತಾಂಡವಾಡುತ್ತಿದೆ, ಸರ್ಕಾರದ ಮಂತ್ರಿಗಳು 60 ಪರ್ಸೆಂಟ್ ಕಮೀಶನ್ ಹೊಡೆಯುತ್ತಿದ್ದಾರೆ ಎಂದು ಹೇಳಿದ ಅವರಿಗೆ ಆವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಕೂಡ ಮರೆತು ಹೋಗಿತ್ತು. ಕೊನೆಗೆ ಹೆಬ್ಬಾಳ್ಕರ್ ಅಂತಷ್ಟೇ ಹೇಳಿ ಅವರು ಗೃಹಲಕ್ಷ್ಮಿ ಯೋಜನೆಯ ನೂರಾರು ಕೋಟಿ ರೂ. ಕಬಳಿಸಿದ್ದಾರೆ ಅಂತ ಗುರುತರವಾದ ಆರೋಪ ಮಾಡಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್