ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಮಧ್ಯಭಾಗದಲ್ಲೇ ಹೊರಟು ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹೊರಡಿ ಎಂದ ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Sep 05, 2023 | 6:06 PM

ಮೈಕ್ ಮುಂದೆ ನಿಂತವರ ಭಾಷಣ ಮುಗಿಯುವ ಲಕ್ಷಣ ಕಾಣದಾದಾಗ ಅವರು ಟೈಂ ನೋಡಿಕೊಂಡು, ಬೆಳಗಾವಿ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಅವರಿಗೆ ಹೊರಡಬೇಕಿರುವ ವಿಷಯ ತಿಳಿಸುತ್ತಾರೆ. ತೊಂದರೆಯಿಲ್ಲ ನೀವು ಹೊರಡಿ ಅಂತ ಹೇಳಿದಾಗ, ಲಕ್ಷ್ಮಿ ತಮ್ಮ ಸಹೋದರನನ್ನು ಕರೆದುಕೊಂಡು ಅಲ್ಲಿಂದ ಹೊರಡುತ್ತಾರೆ.

ಬೆಳಗಾವಿ: ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಇಂದು ಬೆಳಗಾವಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ವೇದಿಕೆ ಮೇಲೆ ಅವರೊಂದಿಗೆ ಲಕ್ಷ್ಮಿ ಸಹೋದರ ಹಾಗೂ ವಿಧಾನ ಪರಿಷತ್ ಸದಸ ಚೆನ್ನರಾಜ್ ಹಟ್ಟಿಹೊಳಿ (Channaraj Hattiholi) ಕೂಡ ಇದ್ದರು. ಅದರೆ ಸಚಿವೆಗೆ ಮತ್ತೊಂದು ಕಡೆಯೂ ಹೋಗಬೇಕಿತ್ತು ಆದರೆ ಕಾರ್ಯಕ್ರಮ ನಡೆಯುತ್ತಿರುವಾಗ ಎದ್ದು ಹೋಗುವುದು ಸರಿಯಲ್ಲ ಅಂತ ಅಂದುಕೊಂಡು ಕುಳಿತೇ ಇರುತ್ತಾರೆ. ಮೈಕ್ ಮುಂದೆ ನಿಂತವರ ಭಾಷಣ ಮುಗಿಯುವ ಲಕ್ಷಣ ಕಾಣದಾದಾಗ ಅವರು ಟೈಂ ನೋಡಿಕೊಂಡು, ಬೆಳಗಾವಿ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಅವರಿಗೆ ಹೊರಡಬೇಕಿರುವ ವಿಷಯ ತಿಳಿಸುತ್ತಾರೆ. ತೊಂದರೆಯಿಲ್ಲ ನೀವು ಹೊರಡಿ ಅಂತ ಹೇಳಿದಾಗ, ಲಕ್ಷ್ಮಿ ತಮ್ಮ ಸಹೋದರನನ್ನು ಕರೆದುಕೊಂಡು ಅಲ್ಲಿಂದ ಹೊರಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.