AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪತ್ತು ನಿರ್ವಹಣಾ ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್ ಗರಂ

ವಿಪತ್ತು ನಿರ್ವಹಣಾ ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್ ಗರಂ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jun 30, 2026 | 5:05 PM

Share

ಮುಖ್ಯಾಂಶಗಳು

  • ಬಾಗಲಕೋಟೆಯಲ್ಲಿ ಎಂ.ಬಿ. ಪಾಟೀಲ್ ನೇತೃತ್ಬದಲ್ಲಿ ವಿಪತ್ತು ನಿರ್ವಹಣಾ ಸಭೆ
  • ಸಭೆಗೆ ಗೈರಾದ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಸಚಿವರು ಗರಂ
  • ಹೆಸ್ಕಾಂ ಅಧಿಕಾರಿಗಳಿಗೆ ಸಭೆಯಲ್ಲೇ ಖಡಕ್​​ ಎಚ್ಚರಿಕೆ ಕೊಟ್ಟ ಸಚಿವ ಎಂ.ಬಿ. ಪಾಟೀಲ್ಲ

ಸಚಿವ ಎಂ.ಬಿ. ಪಾಟೀಲ್ ಅವರು ಬಾಗಲಕೋಟೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಗೆ ಗೈರಾದ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ. ಬಾಗಲಕೋಟೆ ‌ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ನೀರು ಸರಬರಾಜಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆ ಕಠಿಣ ಕ್ರಮದ ಎಚ್ಚರಿಕೆಯನ್ನು ಅಧಿಕಾರಿಗಳಿಗೆ ಅವರು ನೀಡಿದ್ದಾರೆ.

ಬಾಗಲಕೋಟೆ, ಜೂನ್​​ 30: ಸಚಿವ ಎಂ.ಬಿ. ಪಾಟೀಲ್ ಅವರು ಬಾಗಲಕೋಟೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಸಭೆಗೆ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ (EE) ಗೈರಾದ ವಿಚಾರ ಗಮನಕ್ಕೆ ಬಂದ ಕೂಡಲೇ, ನಿಮ್ಮ ಅಧಿಕಾರಿ ಯಾಕೆ ಸಭೆಗೆ ಬಂದಿಲ್ಲ ಎಂದು ಪ್ರಶ್ನಿಸಿ ಸಚಿವರು ಸಿಟ್ಟಾಗಿದ್ದಾರೆ. ಬಾಗಲಕೋಟೆ ‌ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ನೀರು ಸರಬರಾಜಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆ ಹೆಸ್ಕಾಂ ಅಧಿಕಾರಿಗಳನ್ನು ಸಚಿವರು ತರಾಟೆಗೆ ಪಡೆದಿದ್ದು, ಒಂದೂವರೆ ತಿಂಗಳಾದರೂ ಆರ್‌. ‌ಆರ್‌. ನಂಬರ್​​ ಕೊಟ್ಟಿಲ್ಲ. ಒಂದೂವರೆ ವರ್ಷದಿಂದ ಹೀಗೆ ಕೆಲಸ ಮಾಡ್ತಿದಿರಾ ಎಂದು ಹೇಳಿದ ಎಂ.ಬಿ. ಪಾಟೀಲ್​​, ಈ ಸಂಬಂಧ ಅಧಿಕಾರಿಗಳಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us