ಮೀನುಗಾರಿಕೆ ಉದ್ಯಮ ಏಳಿಗೆಗಾಗಿ ಸಮುದ್ರದಲ್ಲಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ

Edited By:

Updated on: Sep 08, 2024 | 6:08 PM

ಕರ್ನಾಟಕ ಮೀನುಗಾರಿಕೆ ಮತ್ತು ಬಂದರು ಒಳನಾಡು ಸಚಿವ ಮಂಕಾಳ ವೈದ್ಯ ಅವರು ಅರಬ್ಬಿ ಸಮುದ್ರಕ್ಕೆ ಬಾಗಿನ ಅರ್ಪಣೆ ಮಾಡಿದರು. ಖುದ್ದು ಅವರೇ ಸಮುದ್ರದಲ್ಲಿ ಬೋಟ್ ಚಲಾಯಿಸಿಕೊಂಡು ಹೋಗಿ ಬಾಗಿನ ಅರ್ಪಿಸಿರುವುದು ವಿಶೇಷ.

ಕಾರವಾರ, (ಸೆಪ್ಟೆಂಬರ್ 08): ಸಚಿವ ಮಂಕಾಳ ವೈದ್ಯ ತಾವೇ ಖುದ್ದಾಗಿ ಬೋಟ್ ಚಲಾಯಿಸಿಕೊಂಡು ಹೋಗಿ ಬಾಗಿನ ಅರ್ಪಿಸಿದ್ದಾರೆ. ರಾಜ್ಯದ ಕರಾವಳಿಯಲ್ಲಿ ತೀವ್ರ ಮತ್ಸ್ಯ ಕ್ಷಾಮ ಉಂಟಾದ ಹಿನ್ನಲೆಯಲ್ಲಿ ಮಂಕಾಳ ವೈದ್ಯ ಇಂದು (ಸೆಪ್ಟೆಂಬರ್ 08) ಬರಪುರ ಮೀನಿನ ಶಿಕಾರಿ ಆಗಲಿ, ನೆಲಕಚ್ಚಿರುವ ಮೀನುಗಾರಿಕಾ ಉದ್ಯಮ ಏಳಿಗೆ ಕಾಣಲಿ ಎಂದು ದುರ್ಗಾಪರಮೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಅರಬ್ಬಿ ಸಮುದ್ರಕ್ಕೆ ಬಾಗಿನ ಅರ್ಪಣೆ ಮಾಡಿದರು. ವಿಶೇಷ ಅಂದ್ರೆ, ಸಚಿವ ಮಂಕಾಳ ವೈದ್ಯ ಅವರು ಅರಬ್ಬಿ ಸಮುದ್ರದಲ್ಲಿ ಬೋಟ್ ಚಲಾಯಿಸಿದರು.

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More