Chakravarthy Sulibele; ಜೈಲಿಗೆ ಹಾಕುವಂಥ ತಪ್ಪು ನನ್ನಿಂದ ಯಾವುದಾಗಿದೆ ಅಂತ ಸಚಿವ ಎಂಬಿ ಪಾಟೀಲರೇ ಸ್ಪಷ್ಟಪಡಿಸಬೇಕು: ಚಕ್ರವರ್ತಿ ಸೂಲಿಬೆಲೆ, ಚಿಂತಕ

ಅರುಣ್​ ಕುಮಾರ್​ ಬೆಳ್ಳಿ

Updated on: Jun 05, 2023 | 3:08 PM

ಸರ್ಕಾರದಲ್ಲಿರುವವರು ಕೆಲಸಕ್ಕೆ ಬಾರದ ಮಾತುಗಳನ್ನಾಡುವ ಬದಲು ಜನರಿಗೆ ನೀಡಿದ ಗ್ಯಾರಂಟಿಗಳನ್ನು ಯಾವುದೇ ಗೊಂದಲವಿಲ್ಲದೆ ಈಡೇರಿಸುವ ಕಡೆ ಗಮನ ನೀಡಬೇಕೆಂದು ಸೂಲಿಬೆಲೆ ಹೇಳಿದರು.

ಬೆಂಗಳೂರು: ಸಚಿವ ಎಂಬಿ ಪಾಟೀಲ್ (MB Patil) ಜೈಲಿಗೆ ಹಾಕಿಸಬೇಕಾಗುತ್ತದೆ ಅಂತ ನೀಡಿರುವ ಹೇಳಿಕೆಗೆ ಚಿಂತಕ ಮತ್ತು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ತಿರುಗೇಟು ನೀಡಿದ್ದಾರೆ. ಜೈಲಿಗೆ ಹಾಕಿಸುವಂಥ ಯಾವ ಪ್ರಮಾದ ತನ್ನಿಂದ ಜರುಗಿದೆ ಅಂತ ಸಚಿವರೇ ಹೇಳಬೇಕು, ಅಸಲು ಸಂಗತಿಯೇನೆಂದರೆ ಅಧಿಕಾರದಲ್ಲಿರುವವರಿಗೆ ಅವರಿಗೆ ಸಹ್ಯವಾಗದ ಸತ್ಯಗಳನ್ನು (truth) ಮಾತಾಡಿದರೆ, ಆಡಳಿತದಲ್ಲಿನ ಅಪಸವ್ಯಗಳನ್ನು ಎತ್ತಿತೋರಿದರೆ ಪಥ್ಯವಾಗದು, ಅಧಿಕಾರ ತಮ್ಮ ಕೈಯಲ್ಲಿದೆ ಅನ್ನೋ ಕಾರಣಕ್ಕೆ ನಾಲಗೆಯನ್ನು ಬೇಕಾಬಿಟ್ಟಿ ಹರಿಬಿಡುತ್ತಾರೆ ಎಂದು ಚಕ್ರವರ್ತಿ ಹೇಳಿದರು. ಸರ್ಕಾರದಲ್ಲಿರುವವರು ಕೆಲಸಕ್ಕೆ ಬಾರದ ಮಾತುಗಳನ್ನಾಡುವ ಬದಲು ಜನರಿಗೆ ನೀಡಿದ ಗ್ಯಾರಂಟಿಗಳನ್ನು ಯಾವುದೇ ಗೊಂದಲವಿಲ್ಲದೆ ಈಡೇರಿಸುವ ಕಡೆ ಗಮನ ನೀಡಬೇಕೆಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.