ಶಾಲೆಯ ಮೇಲಿನ ಬರಹ ಬದಲಾಯಿಸಿದಕ್ಕೆ ‘ಪ್ರಬುದ್ಧತೆ’ಯ ಸಮಾಜಾಯಿಷಿ ನೀಡಿದ ಪ್ರಿಯಾಂಕ್ ಖರ್ಗೆ ಅಪ್ರಬುದ್ಧರಂತೆ ಮಾತಾಡಿದರು!

ಬದಲಾವಣೆ ಪ್ರಕೃತಿ ನಿಯಮ, ಡಾ ಬಿ ಅರ್ ಅಂಬೇಡ್ಕರ್, ಬುದ್ಧ ಮತ್ತು ಬಸವಣ್ಣ ಮೊದಲಾದವರೆಲ್ಲ ಕೇವಲ ಸಮೃದ್ಧ ಸಮಾಜ ಮಾತ್ರವಲ್ಲ ಒಂದು ಪ್ರಬುದ್ಧ ಸಮಾಜವವನ್ನು ಪ್ರತಿಪಾದಿಸಿದ್ದರು, ಮಕ್ಕಳಲ್ಲಿ ವೈಜ್ಞಾನಿಕ ಮತ್ತು ಪ್ರಶ್ನೆ ಕೇಳುವ ಮನೋಭಾವ ಬೆಳೆಯಬೇಕು, ಕಲಿಕೆಯಲ್ಲಿ ಕುತೂಹಲ ಮೂಡಬೇಕು ಅಂತೆಲ್ಲ ಖರ್ಗೆ ಹೇಳುತ್ತಾರೆ.

ಶಾಲೆಯ ಮೇಲಿನ ಬರಹ ಬದಲಾಯಿಸಿದಕ್ಕೆ ‘ಪ್ರಬುದ್ಧತೆ’ಯ ಸಮಾಜಾಯಿಷಿ ನೀಡಿದ ಪ್ರಿಯಾಂಕ್ ಖರ್ಗೆ ಅಪ್ರಬುದ್ಧರಂತೆ ಮಾತಾಡಿದರು!
|

Updated on:Feb 19, 2024 | 5:13 PM

ಬೆಂಗಳೂರು: ಸರ್ಕಾರ ತಪ್ಪೆಸಗಿದಾಗ ಅಥವಾ ಜನಾಭಿಪ್ರಾಯ ಇಲ್ಲವೇ ಸಾರ್ವಜನಿಕ ಆಶಯಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಾಗ ಅದರ ಪ್ರತಿನಿಧಿಗಳು ನೀಡುವ ಸಮಜಾಯಿಷಿ ಅಪ್ರಬುದ್ಧ, ತಮಾಷೆಯೆನಿಸಿ ಜನರಲ್ಲಿ ನಗೆ ಮೂಡಿಸುತ್ತವೆ. ವಿಜಯಪುರ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಗಳ (Morarji residential schools) ಮುಖ್ಯದ್ವಾರದ ಮೇಲ್ಭಾಗದಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ, ಅಂತ ರಾಷ್ಟ್ರಕವಿ ಕುವೆಂಪು (Kuvempu) ವಿರಚಿತ ಕವಿತೆಯ ಬರಹವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಿಸುವ ಕೆಲಸವನ್ನು ರಾಜ್ಯದ ‘ಘನ’ ಸರ್ಕಾರ ಮಾಡಿದೆ. ಯಾಕೆ ಹೀಗೆ ಅಂತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ಮಾಧ್ಯಮ ಪ್ರತಿನಿಧಿಗಳು ಇಂದು ವಿಧಾನ ಸೌಧದ ಆವರಣದಲ್ಲಿ ಕೇಳಿದಾಗ ಅಗಲೇ ಹೇಳಿದಂತೆ ಅವರು ನೀಡುವ ಪ್ರತಿಕ್ರಿಯೆ ಹಾಸ್ಯಾಸ್ಪದ ಅನಿಸುತ್ತದೆ. ಬದಲಾವಣೆ ಪ್ರಕೃತಿ ನಿಯಮ, ಡಾ ಬಿ ಅರ್ ಅಂಬೇಡ್ಕರ್, ಬುದ್ಧ ಮತ್ತು ಬಸವಣ್ಣ ಮೊದಲಾದವರೆಲ್ಲ ಕೇವಲ ಸಮೃದ್ಧ ಸಮಾಜ ಮಾತ್ರವಲ್ಲ ಒಂದು ಪ್ರಬುದ್ಧ ಸಮಾಜವವನ್ನು ಪ್ರತಿಪಾದಿಸಿದ್ದರು, ಮಕ್ಕಳಲ್ಲಿ ವೈಜ್ಞಾನಿಕ ಮತ್ತು ಪ್ರಶ್ನೆ ಕೇಳುವ ಮನೋಭಾವ ಬೆಳೆಯಬೇಕು, ಕಲಿಕೆಯಲ್ಲಿ ಕುತೂಹಲ ಮೂಡಬೇಕು ಅಂತೆಲ್ಲ ಹೇಳುತ್ತಾರೆ. ಅಂದರೆ, ಮೊದಲೆಲ್ಲ ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಕೇಳುವ ಮನೋಭಾವ ಇರಲಿಲ್ಲವೇ? ಬರಹ ಬದಲಾಯಿಸಿದ ಕೂಡಲೇ ಅದು ಬಂದು ಬಿಡುತ್ತದಯೇ? ಆಡುವ ಮಾತಿಗೆ ಲಾಜಿಕ್ ಬೇಡ್ವಾ ಖರ್ಗೆ ಸಾಹೇಬರೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Mon, 19 February 24

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ