ಮೇಧಾವಿಯಂತೆ ವರ್ತಿಸುವ ಪ್ರಿಯಾಂಕ್ ಖರ್ಗೆ ತಾನೊಂದು ನ್ಯಾಯಾಲಯ ಅಂದುಕೊಂಡಂತಿದೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Dec 30, 2024 | 12:32 PM

ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಯಲ್ಲಿ ಕರೆದಿದ್ದ ಮಹತ್ವದ ಸಭೆಯಲ್ಲಿ ಭಾಗವಹಿಸುವುದನ್ನು ಬಿಟ್ಟು ತಾನು ಭಾಲ್ಕಿಗೆ ತೆರಳಿ ಸಚಿನ್ ಅವರ ಅತ್ಯಂತ ಬಡ ಕುಟುಂಬವನ್ನು ಭೇಟಿಯಾಗಿದ್ದಾಗಿ ಹೇಳಿದ ವಿಜಯೇಂದ್ರ, ಸಚಿವ ಖರ್ಗೆಯವರ ಅತ್ಯಂತ ಆಪ್ತ ರಾಜು ಕಪನೂರ್ ಹೆಸರಿನ ವ್ಯಕ್ತಿಯ ಕುಮ್ಮಕ್ಕಿನಿಂದ ಗುತ್ತಿಗೆದಾರ ಸಾವಿಗೆ ಶರಣಾಗಿದ್ದಾನೆ, ಅವರ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು ಎಂದರು.

ಬೆಂಗಳೂರು: ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ನಿವಾಸಿಯಾಗಿದ್ದ ಗುತ್ತಿಗೆದಾರ ಸಚಿನ್ ಪಾಂಚಾಳ್ ಸಾವಿಗೆ ಶರಣಾಗುವ ಮೊದಲು ಬರೆದಿರುವ ಡೆತ್​ನೋಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿದ್ದು ಅವರು ರಾಜೀನಾಮೆ ಸಲ್ಲಿಬೇಕೆಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಖುದ್ದು ಪ್ರಿಯಾಂಕ್ ಅವರೇ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ, ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಬಿಎಸ್ ಯಡಿಯೂರಪ್ಪರನ್ನು ಅಪರಾಧಿ ಎನ್ನಲು ಸಚಿವರೇನು ಸರ್ವೋಚ್ಛ ನ್ಯಾಯಾಲಯವೇ ಅಥವಾ ತನಿಖಾಧಿಕಾರಿಯೇ ಎಂದು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್, ಗ್ಯಾಂಗ್‌ ವಿರುದ್ಧ ಕಬುರಗಿಯಲ್ಲಿ ಕೊನೆಗೂ ಎಫ್​ಐಆರ್ ದಾಖಲು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.