AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಗಂಟೆಗಟ್ಟಲೆ ಮಾತುಕತೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿದೆಹಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಗಂಟೆಗಟ್ಟಲೆ ಮಾತುಕತೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

ದೆಹಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಗಂಟೆಗಟ್ಟಲೆ ಮಾತುಕತೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 11, 2025 | 9:30 PM

Share

ಸತೀಶ್ ಜಾರಕಿಹೊಳಿ ಮತ್ತು ಅವರ ಜೊತೆ ಕೆಲ ಶಾಸಕರು ದುಬೈ ಪ್ರವಾಸ ಹೋಗುವ ಬಗ್ಗೆ ವದಂತಿ ಹರಡಿತ್ತು, ಯಾವಾಗ ಹೋಗ್ತಾ ಇದ್ದೀರಿ ಅಂತ ಕೇಳಿದರೆ, ಅದೆಲ್ಲ ಸುಳ್ಳು ಸುದ್ದಿ, ಯಾರೂ ಎಲ್ಲೂ ಹೋಗುತ್ತಿಲ್ಲ, ಕೇಳಿದ್ದನ್ನೇ ಎಷ್ಟು ಸಲ ಅಂತ ಕೇಳುತ್ತೀರಿ ಅಂತ ಸಚಿವ ಹೇಳಿದರು. ಪತ್ರಕರ್ತರಿಗೆ ಹೆದರಿ ವಿದೇಶಕ್ಕೆ ಹೋಗದಂತಾಗಿದೆ, ಬೇರೆ ಶಾಸಕರೆಲ್ಲ ಗುಂಪುಗುಂಪಾಗಿ ಹೋಗಿ ಬಂದರೂ ತಾನು ಮಾತ್ರ ಹೋಗಲಿಲ್ಲ ಎಂದು ಜಾರಕಿಹೊಳಿ ನಗುತ್ತಾ ಹೇಳಿದರು.

ನವದೆಹಲಿ: ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸುದೀರ್ಘವಾದ ಮಾತುಕತೆ ನಡೆಸಿದ್ದಾರೆ. ಏನೆಲ್ಲ ಮಾತಾಡಿದ್ದು ಸರ್ ಅಂತ ಮಾಧ್ಯಮದವರು ಕೇಳಿದರೆ ಚಾಣಾಕ್ಷ ರಾಜಕಾರಣಿ ಜಾರಕಿಹೊಳಿ ಗುಟ್ಟು ಬಿಟ್ಟುಕೊಡಲ್ಲ. ದೆಹಲಿಗೆ ಬಂದಾಗಲೆಲ್ಲ ವರಿಷ್ಠರು ಅಪಾಯಿಂಟ್ಮೆಂಟ್ ನೀಡುತ್ತಾರೆ, ರಾಜ್ಯದ ರಾಜಕೀಯ ವಿದ್ಯಮಾನಗಳ ಚರ್ಚೆ ನಡೆಯುತ್ತದೆ, ಬೀದರ್ ನಿಂದ ಹಿಡಿದು ಚಾಮರಾಜನಗರದವರೆಗೆ ಏನೆಲ್ಲ ನಡೆಯುತ್ತಿದೆ ಅಂತ ಕೇಳುತ್ತಾರೆ ಎಂದು ಸತೀಶ್ ಹೇಳಿದರು. ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ತಮ್ಮ ಕೆಲಸದ ನಿಮಿತ್ತ ದೆಹಲಿಗೆ ಬಂದಿರಬಹುದು, ತಾನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲು ಬಂದಿದ್ದು ಎಂದು ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸತೀಶ್ ಜಾರಕಿಹೊಳಿ ಮಗ ರಾಹುಲ್‌ ರಾಜಕೀಯಕ್ಕೆ: ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.