ಕಿತ್ತುಹೋದ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್.. ಜಲಾಶಯ ಸಂಪೂರ್ಣ ಖಾಲಿ ಮಾಡ್ತಾರಾ?

|

Updated on: Aug 11, 2024 | 11:29 AM

ಮಳೆಯಿಂದಾಗಿ ಹೊಸಪೇಟೆ ನಗರದ ಹೊರಭಾಗದಲ್ಲಿರೋ ತುಂಗಾಭದ್ರಾ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಇದೀಗ ಜಲಾಶಯ ಗೇಟ್​ಗೆ ಭಾರೀ ಹಾನಿಯಾಗಿದೆ. ಜಲಾಶಯದ 19ನೇ ಚೈನ್​ಲಿಂಕ್​ ಗೇಟ್​ ಕಟ್​ ಆಗಿದೆ. ಇದರಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇನ್ನು ಈ ಗೇಟ್ ರಿಪೇರಿಗೆ ಎಷ್ಟು ನೀರು ಖಾಲಿ ಮಾಡ್ಬೇಕು ಎನ್ನುವ ವಿವರವನ್ನು ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದಾರೆ.

ವಿಜಯನಗರ, (ಆಗಸ್ಟ್ 11): ತುಂಗಾಭದ್ರಾ ಜಲಾಶಯದ ಗೇಟ್​ ನಂಬರ್ 19ರ ಚೈನ್​ ಲಿಂಕ್​ ಕಟ್ ಆಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ. ಸದ್ಯ ತುಂಗಾಭದ್ರಾ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ರೈತರು ಫುಲ್ ಖುಷ್ ಆಗಿದ್ದಾರೆ. ಆದ್ರೆ, ಇದೀಗ ಆತಂಕ ಎದುರಾಗಿದೆ. ಕಟ್​ ಆಗಿರುವ ಗೇಟ್​ ರಿಪೇರಿ ಮಾಡುವುದು ದೊಡ್ಡ ಕೆಲಸವಾಗಿದೆ. ಸದ್ಯ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರಿಂದ ರಿಪೇರಿ ಕಾರ್ಯಕ್ಕೆ ಅಡ್ಡಿಯಾಗಿದೆ. ಹೀಗಾಗಿ ನೀರು ಖಾಲಿ ಮಾಡಬೇಕಿದೆ. ಹೌದು… ಗೇಟ್​ ದುರಸ್ತಿಗೆ 50ರಿಂದ 60 ಟಿಎಂಸಿ ನೀರು ಹೊರ ಬಿಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದಿನಕ್ಕೆ 2 ಲಕ್ಷ ಕ್ಯೂಸೆಕ್ ನೀರು ತುಂಗಭದ್ರಾ ನದಿಗೆ ಹರಿಸಬೇಕಾಗಿದೆ. ಇನ್ನೊಂದೆಡೆ ನದಿ ಹೊಳಹರಿವು ಕಡಿಮೆಯಾಗಿದ್ದರಿಂದ ಮತ್ತೆ ಜಲಾಶಯ ಭರ್ತಿಯಾಗುತ್ತೋ ಇಲ್ಲವೋ ಎನ್ನುವ ಆತಂಕ ರೈತರಲ್ಲಿದೆ. ಇನ್ನು ಈ ಬಗ್ಗೆ ಸಚಿವ ಶಿವರಾಜ್ ತಂಗಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ.

Follow us on